Breaking News
Home / Uncategorized / ಮಂಗಳಮುಖಿಯರಿಗೆ ಕಿಚ್ಚನ ನೆರವು

ಮಂಗಳಮುಖಿಯರಿಗೆ ಕಿಚ್ಚನ ನೆರವು

Spread the love

ಬೆಂಗಳೂರು: ಲಾಕ್‍ಡೌನ್‍ನಿಂದ ಕಷ್ಟ ಅನುಭವಿಸುತ್ತಿರುವ ಮಂಗಳಮುಖಿಯರಿಗೆ ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಫುಡ್ ಕಿಟ್ ನೀಡುವ ಮೂಲಕವಾಗಿ ನೆರವಾಗಿದ್ದಾರೆ.

ಒಂದುಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಮಂಗಳಮುಖಿಯರು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಗೆ ಕರೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ತಕ್ಷಣವೇ ನೆರವಿಗೆ ಬಂದ ಕಿಚ್ಚನ ಚಾರಿಟೇಬಲ್ ಸೊಸೈಟಿ, ಚಿತ್ರದುರ್ಗದ ಮಂಗಳಮುಖಿಯರ ಮನೆಗೆ ದಿನಸಿ ಕಿಟ್‍ಗಳನ್ನು ವಿತರಿಸಿದ್ದಾರೆ. ಇದನ್ನೂ

ಕಿಚ್ಚ ಸರ್ ಕೊರೊನಾ ಸಂದರ್ಭದಲ್ಲಿ ಕಳೆದ ವರ್ಷದಿಂದ ಜನರ ಪರವಾಗಿ ನಿಂತಿದ್ದಾರೆ. ಮಂಗಳಮುಖಿಯರು ಖುಷಿಪಟ್ಟು ಧನ್ಯವಾದ ತಿಳಿಸಿದ್ದಾರೆ. ದಿನಸಿ ವ್ಯವಸ್ಥೆ ಮಾಡಿದ್ದು, ಮಾತ್ರವಲ್ಲದೇ, ಹಣಕಾಸಿನ ಸಹಾಯವನ್ನು ಕಿಚ್ಚ ಸುದೀಪ್ ಮಾಡಿದ್ದಾರೆ ಧನ್ಯವಾದಗಳು ಎಂದು ಮಂಗಳಮುಖಿಯರು ಹೇಳಿದ್ದಾರೆ.

ಮೊದಲು ಮಾನವನಾಗು ಅನ್ನೋ ಒಂದು ಧ್ಯೇಯ ವಾಕ್ಯವನ್ನು ಮೂಲ ಮಂತ್ರವಾಗಿಟ್ಟುಕೊಂಡು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಸಾಕಷ್ಟು ಜನರಿಗೆ ಕಿಚ್ಚ ಸುದೀಪ್ ತಂಡ ನೆರವಿನ ಹಸ್ತ ಚಾಚಿದೆ. ಹಸಿವು ಅಂದವರಿಗೆ ಊಟ, ಕಷ್ಟ ಅಂದವರಿಗೆ ದಿನಸಿಕಿಟ್‍ಗಳನ್ನು ನೀಡುತ್ತಿದ್ದಾರೆ. ಇದನ್ನೂ ಓದಿ:

ಕೋವಿಡ್-19 ಎರಡನೇ ಅಲೆ ಮತ್ತು ಲಾಕ್‍ಡೌನ್‍ನಿಂದಾಗಿ ಅನೇಕ ಶಿಕ್ಷಕರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅಂತಹ ಶಿಕ್ಷಕರಿಗೆ ನೆರವಾಗಲು ಸುದೀಪ್ ಮನಸ್ಸು ಮಾಡಿದ್ದಾರೆ. ಗುರುಗಳಿಗೆ ಕಿಚ್ಚನ ನಮನ ಕಾರ್ಯಕ್ರಮದ ಮೊದಲ ಹಂತವಾಗಿ ಕಷ್ಟದಲ್ಲಿರುವ 50 ಜನ ಶಿಕ್ಷಕರಿಗೆ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ತಲಾ ಎರಡು ಸಾವಿರ ರೂಪಾಯಿ ಗೌರವಧನ ನೀಡಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಕಿಚ್ಚ ಸುದೀಪ್ ಮತ್ತು ಅವರ ತಂಡದ ಈ ಕಾರ್ಯಗಳಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಿಸುವಂತೆ ಸ್ವಾಮೀಜಿಗಳ ಒತ್ತಾಯ: ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್ ನಿನ್ನೆ ಮಂಗಳವಾರ ಹುಬ್ಬಳ್ಳಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ