Breaking News

ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಗದಗದಲ್ಲಿ ಅಜ್ಜಿ ಪರದಾಟ; ವಾಪಸ್ ಊರಿಗೆ ಕಳುಹಿಸಿದ ಪೊಲೀಸರು

Spread the love

ಗದಗ: ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ಜಾರಿಯಾದ ಕಾರಣ ಬಸ್ಗಳ ಓಡಾಡ ಸಂಪೂರ್ಣವಾಗಿ ನಿಂತಿದೆ. ಹೀಗಾಗಿ ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಅಜ್ಜಿಯೊಬ್ಬರು ಪರದಾಟ ಪಟ್ಟಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಅಂಚೆ ಕಚೇರಿಗೆ ಬರುವಂತೆ ವೃದ್ಧೆಗೆ ತಿಳಿಸಿದ್ದರು. ಹೀಗಾಗಿ ಅಜ್ಜಿ ಅಂಚೆ ಕಚೇರಿಗೆ ಸುಮಾರು ಎರಡು ಕಿಲೋಮೀಟರ್ ನಡೆದುಕೊಂಡು ಬಂದಿದ್ದಾರೆ. ಈ ವೇಳೆ ಪೊಲೀಸರು ಅಜ್ಜಿಯನ್ನು ತಡೆದು ಪ್ರಶ್ನೆ ಮಾಡಿದ್ದಾರೆ.

ವೃದ್ಧಾಪ್ಯ ವೇತನ ಪಡೆಯಲು ಎರಡು ಕಿಲೋಮೀಟರ್ ನಡೆದುಕೊಂಡ ಬಂದ ಭಜಂತ್ರಿ ನಗರದ ನಿವಾಸಿ ಯಲ್ಲವ್ವ ಭಜಂತ್ರಿ ಎಂಬ ಅಜ್ಜಿಯನ್ನು ಗದಗದ ಹಳೆಯ ಡಿಸಿ ಕಚೇರಿ ಬಳಿ ಪೊಲೀಸರು ವಿಚಾರಣೆ ಮಾಡಿದ್ದಾರೆ. ಸರಿಯಾಗಿ ಕಿವಿ ಕೆಳದ ಹಿನ್ನಲೆಯಲ್ಲಿ ಅಜ್ಜಿ ಪರದಾಟ ಪಟ್ಟಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಬಂದಿದ್ದೇನೆ ಎಂದು ತಿಳಿಸಿದ ಅಜ್ಜಿಗೆ ಲಾಕ್​ಡೌನ್​ ಹಿನ್ನೆಲೆ ಅಂಚೆ ಕಚೇರಿ ಕ್ಲೋಸ್ ಆಗಿದೆ ಎಂದು ಪೊಲೀಸರು ವಾಪಸ್ ಊರಿಗೆ ಹೋಗುವಂತೆ ತಿಳಿಸಿದ್ದಾರೆ. ವೇತನ ಪಡೆಯದೆ ಅಜ್ಜಿ ಊರಿಗೆ ವಾಪಾಸಾಗಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ