Breaking News
Home / ಜಿಲ್ಲೆ / ಬೆಂಗಳೂರು / ಸರ್ಕಾರಿ ಶಿಕ್ಷಕರ ವೇತನ ಕಡಿತಗೊಳಿಸಿ ಖಾಸಗಿ ಶಿಕ್ಷಕರಿಗೆ ಪ್ಯಾಕೇಜ್

ಸರ್ಕಾರಿ ಶಿಕ್ಷಕರ ವೇತನ ಕಡಿತಗೊಳಿಸಿ ಖಾಸಗಿ ಶಿಕ್ಷಕರಿಗೆ ಪ್ಯಾಕೇಜ್

Spread the love

ಬೆಂಗಳೂರು: ರಾಜ್ಯದ ಅನುದಾನರಹಿತ ಶಾಲಾ- ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ರಾಜ್ಯ ಸರ್ಕಾರ ಚಿಂತಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರ ಕೆಲವು ದಿನಗಳ ವೇತನ ಕಡಿತಗೊಳಿಸಿ ಆ ಹಣದಿಂದ ಪ್ಯಾಕೇಜ್ ನೀಡುವ ಬಗ್ಗೆ ಸಚಿವ ಎಸ್.ಸುರೇಶ್ ಕುಮಾರ್‌ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಅವರು, ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ವಿವಿಧ ಪರೀಕ್ಷಾ ಪ್ರಕ್ರಿಯೆಗಳಲ್ಲಿ (ಎಸ್ಸೆಸ್ಸೆಲ್ಸಿ, ಪಿಯುಸಿ, ಟಿಇಟಿ ಸೇರಿದಂತೆ ವಿವಿಧ ಪರೀಕ್ಷೆಗಳು)ಸಂಗ್ರಹವಾಗಿರುವ ಪರೀಕ್ಷಾ ಶುಲ್ಕದ ಸಂಚಿತ ನಿಧಿಯ (ಉಳಿಕೆ ಹಣ) ಸಂಪೂರ್ಣ ವಿವರ, ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರಿಂದ ಸಂಗ್ರಹವಾಗುವ ವೇತನ ವಂತಿಗೆಯನ್ನು ಖಾಸಗಿ ಶಾಲಾ- ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿಗೆ ನೀಡಲಾಗುವುದು. ಈ ಸಂಬಂಧ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸಚಿವರು ಇಲಾಖೆಯ ಆಯುಕ್ತರು, ಡಿಡಿಪಿಯು, ಡಿಡಿಪಿಐ ಅವರಿಗೆ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ