Breaking News

“ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” ಒಂದೇ ಸಮಯಕ್ಕೆ ನಾಡಿನಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಪ್ರತಿಭಟನೆ

Spread the love

ಬೆಳಗಾವಿ: ಕರ್ನಾಟಕದ ಚರಿತ್ರೆಯಲ್ಲೇ ಮೊದಲ ಬಾರಿ ಜೂನ್ 10ರಂದು ಗುರುವಾರ ಬೆಳಿಗ್ಗೆ 9 ಗಂಟೆ 10 ನಿಮಿಷಕ್ಕೆ ಸರಿಯಾಗಿ ಒಂದೇ ದಿನ, ಒಂದೇ ಸಮಯಕ್ಕೆ ನಾಡಿನಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದ್ದು, “ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಕರ್ನಾಟಕ ರಕ್ಷಣ ವೇದಿಕೆ ತಿಳಿಸಿದೆ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರ ಜೂಮ್ ಸಭೆಯಲ್ಲಿ ಈ ಐತಿಹಾಸಿಕ ನಿರ್ಣಯ ಅಂಗೀಕರಿಸಲಾಗಿದ್ದು, ನಾರಾಯಣಗೌಡರ ಜನ್ಮದಿನವೂ ಆಗಿರುವ ಜೂ.10ರಂದು ಲಕ್ಷಾಂತರ ಕರವೇ ಕಾರ್ಯಕರ್ತರು ‘ಪ್ರತಿಭಟನಾ ದಿನ’ವನ್ನಾಗಿ ಆಚರಿಸಿ, ರಾಜ್ಯದ ಸಮಸ್ತ ಜನತೆಯ ಹಕ್ಕೊತ್ತಾಯವನ್ನು ಮಂಡಿಸಲಿದ್ದಾರೆ.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ