Breaking News
Home / ರಾಜ್ಯ / ಕೋವಿಡ್ ಗೆ ದಂಪತಿ ಬಲಿ ಅನಾಥರಾಗಿರುವ ಎಂಟು ಜನ ಮಕ್ಕಳು

ಕೋವಿಡ್ ಗೆ ದಂಪತಿ ಬಲಿ ಅನಾಥರಾಗಿರುವ ಎಂಟು ಜನ ಮಕ್ಕಳು

Spread the love

ಬಾಗಲಕೋಟೆ: ವಾರದ ಅಂತರದಲ್ಲಿ ಕೋವಿಡ್ ಗೆ ದಂಪತಿ ಬಲಿಯಾದ ಕಾರಣ, ಎಂಟು ಜನ ಮಕ್ಕಳು ಅನಾಥರಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಿಗಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಮಪ್ಪ ಹೂಗಾರ, ದುಂಡವ್ವ ಹೂಗಾರ ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಳೆದ ಶನಿವಾರ ಮೇ 29 ರಂದು ದುಂಡವ್ವ ಹೂಗಾರ ಮೃತರಾದರೆ, ಬಳಿಕ ಪತಿ ದುಂಡಪ್ಪ ಸಾವನ್ನಪ್ಪಿದ್ದಾರೆ. ಕಾರಣ ಎಂಟು ಜನ ಮಕ್ಕಳು ಅನಾಥರಾಗಿದ್ದಾರೆ. ದಂಪತಿಗೆ ಏಳು ಜನ ಹೆಣ್ಣು ಮಕ್ಕಳು, ಓರ್ವ ಗಂಡು ಮಗ ಇದ್ದು, ಆರು ಜನ ಹೆಣ್ಣು ಮಕ್ಕಳ ಮದುವೆ ಮಾಡಿದ್ದಾರೆ. ಇನ್ನೋರ್ವ 16 ವರ್ಷದ ಪುತ್ರಿ, 17 ವರ್ಷದ ಮಗ ಇದ್ದಾರೆ. ತಂದೆ ತಾಯಿ ಕಳೆದುಕೊಂಡು ಅನಾಥರಾದ ಮಕ್ಕಳು, ಬೇಸರದ ಜೀವನ ಸಾಗಿಸುತ್ತಿದ್ದಾರೆ.

ಮೊದಲು ರಾಮಪ್ಪ ಹೂಗಾರಗೆ ಸೊಂಕು ಕಾಣಿಸಿಕೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಆದರೆ ಪತಿಯ ಆರೈಕೆ ಮಾಡುತಿದ್ದ ಪತ್ನಿಗೂ ನಂತರ ಸೊಂಕು ತಗುಲಿ ವಾರದ ಬಳಿಕ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಎಂಟು ಲಕ್ಷ ರೂ. ಖರ್ಚು ಮಾಡಿದರೂ ತಂದೆ, ತಾಯಿಯನ್ನು ಬದುಕಿಸಿಕೊಳ್ಳಲು ಆಗಲಿಲ್ಲ ಎಂದು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

Spread the love ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ