Breaking News
Home / ರಾಜಕೀಯ / ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟ ಕರೊನಾ..

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟ ಕರೊನಾ..

Spread the love

ಮೈಸೂರು: ನೂರಾರು ಕನಸಿನ ಬುತ್ತಿಯೊಂದಿಗೆ ಎರಡು ತಿಂಗಳ ಹಿಂದಷ್ಟೇ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಅಷ್ಟರಲ್ಲಿ ಸುಖಸಂಸಾರಕ್ಕೆ ಬಂದಪ್ಪಳಿಸಿದ ಮಹಾಮಾರಿ ಕರೊನಾ, ನವವಿವಾಹಿತನ ಪ್ರಾಣ ತೆಗೆದ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ, ಇಂಜಿನಿಯರ್​ ನವೀನ್ ಕುಮಾರ್ ಮೃತ ದುರ್ದೈವಿ. ಬೆಂಗಳೂರಿನ ಜೈನ್ ವಿವಿಯಲ್ಲಿ ಕೆಲಸ‌ ಮಾಡುತ್ತಿದ್ದ ನವೀನ್, ಎರಡು ತಿಂಗಳ ಹಿಂದಷ್ಟೆ ಮದುವೆ ಆಗಿದ್ದರು. ಇತ್ತೀಚಿಗೆ ತೀವ್ರ ಉಸಿರಾಟದ ಬಳಲುತ್ತಿದ್ದ ನವೀನ್​, ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ಕರೊನಾ ತಪಾಸಣೆ ಮಾಡಿಸಿದ್ದರು. ವರದಿಯು ಪಾಸಿಟಿವ್​ ಬಂದಿತ್ತು. ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ನವೀನ್​ ಸಾವಿಂದ ಕಂಗಾಲಾದ ಪತ್ನಿಯ ಮತ್ತು ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ