ಕೋವಿಡ್ -19 ಸಾಂಕ್ರಾಮಿಕ ರೋಗಕ್ಕಿಂತ ದೀರ್ಘಕಾಲದ ಲಾಕ್ಡೌನ್ ಹೆಚ್ಚು ಗಂಭೀರ ಬಿಕ್ಕಟ್ಟನ್ನು ಸೃಷ್ಟಿಸುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ವೈರಸ್ ಅನ್ನು ಎದುರಿಸಲು ‘ಹೇಗೆ ಬದುಕಬೇಕು’ ಎಂದು ಕಲಿಯಲು ಅವರು ಸಲಹೆ ನೀಡಿದರು.

ಮುಂಬೈ: ದೀರ್ಘಕಾಲದ ಲಾಕ್ಡೌನ್ (Lockdown) ಕೋವಿಡ್ -19 ಸಾಂಕ್ರಾಮಿಕ ರೋಗಕ್ಕಿಂತ ಗಂಭೀರ ಬಿಕ್ಕಟ್ಟನ್ನು ಸೃಷ್ಟಿಸುತ್ತದೆ ಎಂದು ತಿಳಿಸಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಕರೋನಾದೊಂದಿಗೆ ‘ಹೇಗೆ ಬದುಕಬೇಕು’ ಎಂದು ಕಲಿಯಬೇಕು ಎಂದು ಸಲಹೆ ನೀಡಿದ್ದಾರೆ.
ಸಾಂಕ್ರಾಮಿಕ ರೋಗವು ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ಜನರ ಸುರಕ್ಷತೆ ಮತ್ತು ಆರ್ಥಿಕತೆಯ ನಡುವೆ ಸಮತೋಲನವನ್ನು ಸಾಧಿಸುವ ಅವಶ್ಯಕತೆಯಿದೆ ಎಂದವರು ತಿಳಿಸಿದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ಹಸಿದ ಹೊಟ್ಟೆಗೆ ಯಾವುದೇ ತತ್ವಶಾಸ್ತ್ರವು ಉಪಯುಕ್ತವಲ್ಲ. ಕೋವಿಡ್ -19 (Covid-19) ಜೊತೆಗೆ ಹೇಗೆ ಬದುಕಬೇಕು ಎಂಬುದನ್ನು ನಾವು ಕಲಿಯಬೇಕಾಗಿದೆ. ನಮ್ಮನ್ನು ರಕ್ಷಿಸಿಕೊಳ್ಳಲು ಮತ್ತು ಆರ್ಥಿಕತೆಯನ್ನು ವೇಗಗೊಳಿಸಲು ನಾವು ಸಮತೋಲನವನ್ನು ಸಾಧಿಸಬೇಕಾಗಿದೆ ಎಂದು ಕರೆ ನೀಡಿದರು.
ಆದಾಯವೂ ಕಡಿಮೆಯಾಗಿದೆ ಎಂದು ಅವರು ಒಪ್ಪಿಕೊಂಡರು.
Laxmi News 24×7