Breaking News

ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ

Spread the love

ಬೆಂಗಳೂರು: ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ.

ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್​ ಘೋಷಿಸಿರುವ ಸಿಎಂ ಯಡಿಯೂರಪ್ಪ, ತಲಾ 3000ದಂತೆ ಮಗ್ಗಗಳ ಕಾರ್ಮಿಕರಿಗೆ,
ಚಲನಚಿತ್ರ, ದೂರದರ್ಶನ ಕಲಾವಿದರಿಗೆ ತಲಾ ₹3000, ಮೀನುಗಾರರಿಗೆ ತಲಾ 3000 ರೂ, ಅರ್ಚಕರು, ಅಡುಗೆ ಕೆಲಸಗಾರರಿಗೆ ತಲಾ ₹3000,
ಸಿ ವರ್ಗದ ದೇವಸ್ಥಾನದ ಅರ್ಚಕರು, ಅಡುಗೆ ಕೆಲಸ, ಸಹಾಯಕರು, ಮಸೀದಿ ಫೇಶಿಮಾಂ, ಮೌಂಜನ್​ಗೆ ತಲಾ ₹3000 ಆಶಾ ಕಾರ್ಯಕರ್ತೆಯರಿಗೂ ತಲಾ ತಲಾ ₹3000, ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ ತಲಾ ₹2000, ಶಾಲಾ ಮಕ್ಕಳಿಗೆ ಜೂನ್, ಜುಲೈನಲ್ಲಿ ಹಾಲಿನ ಪುಡಿ ನೀಡಿಕೆ, ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ತಲಾ 5000 ರೂ. ಸಹಾಯ ಧನ ಘೋಷಿಸಿದ್ದಾರೆ.

ಪಾಸಿಟಿವಿಟಿ ರೇಟ್​ ಶೇ.5ಕ್ಕಿಂತ ಕಡಿಮೆಯಾದರೆ ರಿಲೀಫ್ ನೀಡಲಾಗುವುದು. ಲಾಕ್​ಡೌನ್​ ನಿಯಮಗಳನ್ನು ಸಡಿಲ ಮಾಡಲಾಗುವುದು. ಜನರು ಸಹಕರಿಸಿದರೆ ಲಾಕ್​ಡೌನ್​ ಸಡಿಲಿಸಲಾಗುವುದು. ಆದರೆ ಒಂದು ವಾರ ಯಾವುದೇ ಬದಲಾವಣೆ ಇಲ್ಲ ಎಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ