Breaking News
Home / ರಾಜ್ಯ / ಸಂಪುಟ ಪುನಾರಚನೆ ಆಗುತ್ತಾ? ನಾಯಕತ್ವ ಬದಲಾವಣೆ ಇದೆಯಾ?

ಸಂಪುಟ ಪುನಾರಚನೆ ಆಗುತ್ತಾ? ನಾಯಕತ್ವ ಬದಲಾವಣೆ ಇದೆಯಾ?

Spread the love

ಬೆಂಗಳೂರು: ರಾಜ್ಯದಲ್ಲಿ ಕರೊನಾ ಹಾವಳಿ ನಡುವೆಯೇ ರಾಜಕೀಯ ವಿಚಾರವೂ ಗರಿಗೆದರಿದ್ದು, ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ತುಂಬಾ ಮಾತುಗಳು ಕೇಳಿ ಬರುತ್ತಿವೆ. ಇವೆಲ್ಲದಕ್ಕೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರೆ.

ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಎರಡೂ ಊಹಾಪೋಹ ಎಂಬ ಸ್ಪಷ್ಟನೆ ನೀಡಿದ್ದಾರೆ. ಮಾತ್ರವಲ್ಲ, ಆ ಥರದ ಯಾವುದೇ ವಿಚಾರಗಳು ನಮ್ಮ ಕಣ್ಮುಂದೆ ಇಲ್ಲ. ಕೇಂದ್ರ ಸರ್ಕಾರ ಕೂಡ ಆ ಬಗ್ಗೆ ಯಾವುದೇ ಸೂಚನೆ ಕೊಟ್ಟಿಲ್ಲ. ಮುಂದೆ ಕೇಂದ್ರ ಸರ್ಕಾರ ಸೂಚನೆ ಕೊಟ್ಟಂತೆ ನಡೆದುಕೊಳ್ಳುತ್ತೇವೆ ಎನ್ನುವ ಮೂಲಕ ಅವರು ಸದ್ಯಕ್ಕೆ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಇಲ್ಲ ಎಂಬುದನ್ನು ಸ್ಷಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಚುನಾವಣೆ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆ: ವಿಚಾರಣೆ ಏ.20ಕ್ಕೆ ಮುಂದೂಡಿಕೆ

Spread the loveಶಿವಮೊಗ್ಗ: ಲೋಕಸಭೆ ಚುನಾವಣೆ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ಪ್ರಚಾರದ ವೇಳೆ ಹಾಗೂ ಸಭೆಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ