ಬೆಂಗಳೂರು: ಕೋವಿಡ್ ಸಂಬಂಧ ಪ್ರಕರಣಗಳ PIL ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಸ್ಲಮ್, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡುವಂತೆ ಆದೇಶ ಹೊರಡಿಸಿದೆ.
ಎನ್ಜಿಒಗಳ ಸಹಕಾರ ಪಡೆದು ಪೌರ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರು, ಆದ್ಯತಾ ವಲಯಗಳಿಗೆ ವ್ಯಾಕ್ಸಿನ್ ನೀಡಿ. ಇವರ ಕುಟುಂಬದವರಿಗೂ ವ್ಯಾಕ್ಸಿನೇಷನ್ಗೆ ಕ್ರಮವಹಿಸಿ. ಇದಕ್ಕಾಗಿ ನಡೆಸಿದ ವಿಶೇಷ ಅಭಿಯಾನಗಳ ಮಾಹಿತಿ ನೀಡಿ. ವಿಶೇಷ ಚೇತನರಿಗೆ ವ್ಯಾಕ್ಸಿನೇಷನ್ ಬಗ್ಗೆಯೂ ಮಾಹಿತಿ ನೀಡಿ ಎಂದು ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತು.