Breaking News

ಬೆಳಗಾವಿ: ಮುಖ್ಯಮಂತ್ರಿಗೆ ಮುತ್ತಿಗೆ ಹಾಕಲು ಬಂದಿದ್ದ ರೈತರು ವಶಕ್ಕೆ

Spread the love

ಬೆಳಗಾವಿ: ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಕಬ್ಬಿನ ಬಾಕಿ ಬಿಲ್ ಗಾಗಿ ಆಗ್ರಹಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸುವರ್ಣ ವಿಧಾನಸೌಧದಲ್ಲಿ ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ರೈತರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಬೆಳಗ್ಗೆ ಸುವರ್ಣ ವಿಧಾನಸೌಧ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಕಬ್ಬಿನ ಬಿಲ್ ಬಾಕಿ ಪಾವತಿಸಲು ಸಿಎಂ ಕ್ರಮ ಕೈಗೊಳ್ಳಬೇಕು. ತರಕಾರಿ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಆರೋಪಿಸಿ ರೈತ ಮುಖಂಡ ಚೂನಪ್ಪ ಪೂಜಾರಿ, ರಾಘವೇಂದ್ರ ನಾಯಕ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಕೂಡಲೇ ಸ್ಥಳಕ್ಕೆ‌ ಧಾವಿಸಿದ ಹಿರೇಬಾಗೇವಾಡಿ ಇನ್ಸಪೆಕ್ಟರ್ ವಿಜಯ ಸಿನ್ನೂರ ಹಾಗೂ ಸಿಬ್ಬಂದಿ ಅವರೊಂದಿಗೆ ರೈತ ಮುಖಂಡರು ವಾಗ್ವಾದ ನಡೆಸಿದರು. ಹಿರೇಬಾಗೇವಾಡಿ ಪೊಲೀಸರು ರೈತರನ್ನು ವಶಕ್ಕೆ ಪಡೆದುಕೊಂಡರು.


Spread the love

About Laxminews 24x7

Check Also

ಭಾರಿ ಮಳೆ,ಗೋಡೆ ಕುಸಿದು ಮಹಿಳೆ ಸಾವು

Spread the loveಬೆಳಗಾವಿ : ನಗರದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಮಹಿಳೆಯೊಬ್ಬಳು ಮೃತಪಟ್ಟಿದ್ದು ಪತಿ ಸ್ವಲ್ಪದರಲ್ಲೇ ಪಾರಾದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ