ಬೆಳಗಾವಿ : ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಆಡಳಿತಾಧಿಕಾರಿಯನ್ನಾಗಿ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲೆಯ ಕೊರೋನಾ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಆದಿತ್ಯ ಬಿಸ್ವಾಸ್ ತಕ್ಷಣ ಅಧಿಕಾರ ವಹಿಸಿಕೊಳ್ಳಲಿದ್ದು, ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ಸಿಎಂ ತಿಳಿಸಿದರು.
ಬಿಮ್ಸ್ ನಲ್ಲಿ ಕೊರೋನಾ ಚಿಕಿತ್ಸೆಯ ಅವ್ಯವಸ್ಥೆ ಕುರಿತು ಭಾರಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಆಗಮಿಸಿದ್ದರು.
 Laxmi News 24×7
Laxmi News 24×7
				 
		 
						
					