Breaking News

ಐಎಎಸ್ ಅನ್ನು ಇವತ್ತು ಧನ ಕಾಯುವವನು ಮಾಡುತ್ತಾನೆ : ರೋಹಿಣಿ ವಿರುದ್ಧ ಎ ಮಂಜು ಕಿಡಿ

Spread the love

ಮೈಸೂರು : ಐಎಎಸ್ ಇವತ್ತು ಧನ ಕಾಯುವವನು ಮಾಡುತ್ತಾನೆ. ಐಎಎಸ್ ಮಾಡಿದ ಮೇಲೆ ಅಧಿಕಾರ ಹೇಗೆ ನಡೆಸುತ್ತೇವೆ ಎನ್ನುವುದು ಮುಖ್ಯ. ಧನ ಕಾಯುವವನು, ಅಡ್ಜೆಸ್ಟ್ ಮೆಂಟ್ ನಲ್ಲೂ ಐಎಎಸ್ ಮಾಡುತ್ತಾನೆ. ಇವಾಗ ಯಾರ್ ಬೇಕಾದ್ರೂ ಐಎಎಸ್ ಮಾಡ್ತರೆ. ಆದ್ರೆ ಜನರ ಸೇವೆ ಹೇಗೆ ಮಾಡುತ್ತೇವೆ ಅನ್ನೋದೇ ಮುಖ್ಯ ಎಂದು ಎ ಮಂಜು ರೋಹಿಣಿ ಸಿಂಧೂರಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಮೈಸೂರು ಮಹಾರಾಜರೇ ಸ್ವಿಮ್ಮಿಂಗ್ ಪೂಲ್ ಕಟ್ಟಲಿಲ್ಲ. ಸರ್ಕಾರಿ ಸ್ಥಳದಲ್ಲಿ ಈ ಟೈಮ್ ನಲ್ಲಿ ಬೇಕಿತ್ತಾ..? ಸರ್ಕಾರಿ ಅಧಿಕಾರಿ ಒಂದೇ ಕಡೆ ಇರುತ್ತಾರಾ.? 5 ವರ್ಷ ಆದಮೇಲೆ ವರ್ಗಾವಣೆ ಆಗುತ್ತಾರೆ.

ಇದು ಗುತ್ತಿಗೆ ಕಂಟ್ರಾಕ್ಟರ್ ಗೋಸ್ಕರ ಮಾಡಿರುವ ಕೆಲಸ ಅಷ್ಟೇ ಎಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾಜಿ ಸಚಿವ ಎ. ಮಂಜು ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ