Breaking News
Home / ರಾಜ್ಯ / ರೈತರ ಬಿಡುಗಡೆಗೆ ಆಗ್ರಹಿಸಿ ಪೊಲೀಸ್‌ ಠಾಣೆ ಮುಂದೆ ಟಿಕಾಯತ್‌, ಯಾದವ್‌ ಧರಣಿ

ರೈತರ ಬಿಡುಗಡೆಗೆ ಆಗ್ರಹಿಸಿ ಪೊಲೀಸ್‌ ಠಾಣೆ ಮುಂದೆ ಟಿಕಾಯತ್‌, ಯಾದವ್‌ ಧರಣಿ

Spread the love

ಟೊಹಾನಾ, ಹರಿಯಾಣ: ಬಂಧಿತ ಇಬ್ಬರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ರೈತ ಮುಖಂಡರಾದ ರಾಕೇಶ್‌ ಟಿಕಾಯತ್, ಗುರ್ನಾಮ್ ಸಿಂಗ್‌ ಚದೂನಿ ಹಾಗೂ ಸಂಯುಕ್ತ ಕಿಸಾನ್‌ ಮೋರ್ಚಾ ಮುಖಂಡ ಯೋಗೇಂದ್ರ ಯಾದವ್ ಅವರು ಫತೇಹಾಬಾದ್‌ನ ಸದರ್‌ ಪೊಲೀಸ್‌ ಠಾಣೆ ಮುಂದೆ ಶನಿವಾರ ರಾತ್ರಿ ಧರಣಿ ನಡೆಸಿದರು.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಪಂಜಾಬ್‌ ಹಾಗೂ ಹರಿಯಾಣದ ವಿವಿಧೆಡೆ ಶನಿವಾರ ಪ್ರತಿಭಟನೆ ಹಮ್ಮಿಕೊಂಡಿದ್ದವು. ಈ ವೇಳೆ ಫತೇಹಾಬಾದ್‌ನಲ್ಲಿರುವ ಜೆಜೆಪಿ ಶಾಸಕ ದೇವಂದ್ರ ಬಬ್ಲಿ ಅವರ ಮುಂದೆ ಕೆಲ ರೈತರು ಧರಣಿ ನಡೆಸಿ, ಘೇರಾವ್‌ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ರೈತರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತನಾಡಿರುವ ಶಾಸಕ ಬಬ್ಲಿ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ಟಿಕಾಯತ್‌ ಹಾಗೂ ಇತರ ಪ್ರತಿಭಟನಕಾರರು ಒತ್ತಾಯಿಸಿದರು.

ಪೊಲೀಸ್‌ ಠಾಣೆ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯೋಗೇಂದ್ರ ಯಾದವ್‌, ‘ಬಂಧಿತ ಇಬ್ಬರು ರೈತರನ್ನು ಬಿಡುಗಡೆ ಮಾಡಬೇಕು ಎಂಬುದು ನಮ್ಮ ಬೇಡಿಕೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆಯೊಂದಿಗಿನ ಮಾತುಕತೆ ಫಲಪ್ರದವಾಗದ ಕಾರಣ, ಬಿಕ್ಕಟ್ಟು ತಲೆದೋರಿದೆ’ ಎಂದರು.

‘ನಾವು ಎರಡು ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಬಂಧಿತ ರೈತರಾದ ವಿಕಾಸ್‌ ಹಾಗೂ ರವಿ ಆಜಾದ್‌ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲವೇ ನಮ್ಮನ್ನೆಲ್ಲಾ ಬಂಧಿಸಿ, ಜೈಲಿಗೆ ಕಳುಹಿಸಬೇಕು ಎಂಬುದು ಮೊದಲನೇ ಬೇಡಿಕೆ’ ಎಂದರು.

‘ರೈತರನ್ನು ನಿಂದಿಸಿದ್ದ ಶಾಸಕ ಬಬ್ಲಿ ಈಗಾಗಲೇ ಕ್ಷಮೆ ಕೇಳಿದ್ದಾರೆ. ಹೀಗಾಗಿ ಎರಡನೇ ಬೇಡಿಕೆ ಈಡೇರಿದೆ’ ಎಂದು ಯಾದವ್‌ ಹೇಳಿದರು.

‘ಈ ಇಬ್ಬರು ರೈತರ ವಿರುದ್ಧ ಶಾಸಕ ಬಬ್ಲಿ ದೂರು ನೀಡಿಲ್ಲ. ಆದರೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂತೆಗೆದುಕೊಳ್ಳಲು ಹರಿಯಾಣ ಸರ್ಕಾರ ಸಿದ್ಧವಿಲ್ಲ’ ಎಂದು ಯಾದವ್‌ ದೂರಿದರು

ಇದಕ್ಕೂ ಮುನ್ನ ಅವರು ಇಲ್ಲಿನ ಮಾರುಕಟ್ಟೆಯಲ್ಲಿ ಜಮಾಯಿಸಿ, ನಂತರ ಮೆರವಣಿಗೆ ಮೂಲಕ ಪೊಲೀಸ್‌ ಠಾಣೆಗೆ ಬಂದರು. ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಹಾಕಲಾಗಿತ್ತು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ