Home / ರಾಜ್ಯ / ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್

ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್

Spread the love

ನಟ ದರ್ಶನ್​ ಹೇಳಿದ್ದನ್ನು ಅಭಿಮಾನಿಗಳು ಚಾಚೂತಪ್ಪದೆ ಪಾಲಿಸುತ್ತಾರೆ. ಈ ಮೊದಲು ಕರ್ನಾಟಕದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ‘ನನ್ನ ಬರ್ತ್​ಡೇ ಆಚರಣೆ ಬೇಡ. ಬದಲಿಗೆ ದಿನಸಿ ತಂದುಕೊಡಿ. ಅದನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ತಲುಪಿಸುತ್ತೇವೆ’ ಎಂದು ದರ್ಶನ್​ ಹೇಳಿದ್ದರು. ಇದನ್ನು ಅಭಿಮಾನಿಗಳು ಮಾಡಿದ್ದರು. ಈಗ ಕೊವಿಡ್​ ಸಂದರ್ಭದಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವಂತೆ ದರ್ಶನ್​ ಮನವಿ ಮಾಡಿದ್ದು, ಅವರ ಕರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.

 

ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಪ್ರವಾಸಿ ಸ್ಥಳಗಳು, ಝೂಗಳು ಕ್ಲೋಸ್​ ಆಗಿವೆ. ಹೀಗಾಗಿ ಝೂಗಳಿಗೆ ಯಾವುದೇ ಆದಾಯ ಬರುತ್ತಿಲ್ಲ. ಇದರಿಂದ ಅಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದೆ. ಇದು ದರ್ಶನ್​ ಗಮನಕ್ಕೆ ಬಂದಿದೆ. ಕರ್ನಾಟಕದಲ್ಲಿ 9 ಝೂಗಳಿವೆ. ಎಲ್ಲಾ ಪ್ರಾಣಿ ಸಂಗ್ರಹಾಲಯದ ಪರಿಸ್ಥಿತಿಯೂ ಒಂದೇ ರೀತಿ ಇದೆ. ಹಾಗಾಗಿ ನಿಮ್ಮ ಕೈಲಾದ ಪ್ರಾಣಿಗಳನ್ನ ದತ್ತು ಪಡೆಯಿರಿ ಎಂದು ದರ್ಶನ್ ಮನವಿ ಮಾಡಿದ್ದರು. ಇದಕ್ಕೆ ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯೆ ಬಂದಿದೆ.

ದರ್ಶನ್​ ಕರೆ ನೀಡಿದ ಒಂದೇ ದಿನದಲ್ಲಿ ಸಾಕಷ್ಟು ಜನರು ಮುಂದೆ ಬಂದು ಝೂನ ಪ್ರಾಣಿಗಳನ್ನು ದತ್ತು ಪಡೆಯುತ್ತಿದ್ದಾರೆ. ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ದರ್ಶನ್ ಹೆಸರಿನ ಸಿಂಹವನ್ನು ನಿರ್ಮಾಪಕರಾದ ಶೈಲಜಾ ನಾಗ್ ದತ್ತು ಪಡೆದಿದ್ದಾರೆ. ಇದಕ್ಕೆ ದರ್ಶನ್​ ಧನ್ಯವಾದ ಅರ್ಪಿಸಿದ್ದಾರೆ.

 

ಕೆಲವರು ಲವ್​ ಬರ್ಡ್​ ದತ್ತು ಪಡೆದರೆ, ಇನ್ನೂ ಕೆಲವರು ಕಾಳಿಂಗ ಸರ್ಪ ತೆಗೆದುಕೊಂಡಿದ್ದಾರೆ. ಇವರೆಲ್ಲರಿಗೂ ಧನ್ಯವಾದ ಅರ್ಪಿಸುವ ಕೆಲಸವನ್ನು ದರ್ಶನ್​ ಮಾಡಿದ್ದಾರೆ.

 

 


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ