Breaking News
Home / ರಾಜ್ಯ / ಬೆಳಗಾವಿ ಜಿಲ್ಲೆಯ ಯುವಕನಿಂದಾಗಿ ಮೋಸ ಹೋದ ದಾವಣಗೆರೆ ಯುವತಿ ಆತ್ಮ ಹತ್ಯೆ…..ಆತನಿಗೆ ಗಲ್ಲು ಶಿಕ್ಷೆ ಕೊಡಿಸಿ.. ನೊಂದ ಪ್ರಿಯತಮೆಯ ಕೊನೇ ಮನವಿ.!

ಬೆಳಗಾವಿ ಜಿಲ್ಲೆಯ ಯುವಕನಿಂದಾಗಿ ಮೋಸ ಹೋದ ದಾವಣಗೆರೆ ಯುವತಿ ಆತ್ಮ ಹತ್ಯೆ…..ಆತನಿಗೆ ಗಲ್ಲು ಶಿಕ್ಷೆ ಕೊಡಿಸಿ.. ನೊಂದ ಪ್ರಿಯತಮೆಯ ಕೊನೇ ಮನವಿ.!

Spread the love

ದಾವಣಗೆರೆ: ಪ್ರಿಯಕರನ ವಂಚನೆಯಿಂದ ಬೇಸತ್ತ ಪ್ರೇಮಿ ನೇಣು ಹಾಕಿಕೊಂಡು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಭಾನುವಾರ ದಾವಣಗೆರೆಯ ಭಾರತ್ ಕಾಲೋನಿಯಲ್ಲಿ ನಡೆದಿದೆ.

ಭಾರತ್ ಕಾಲೋನಿಯ ಆಶಾ(22) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಆಶಾ ಕೆ.ಬಿ. ಈರಣ್ಣ ಎಂಬಾತತನ್ನು ಪ್ರೀತಿಸುತ್ತಿದ್ದರು. ಈಚೆಗೆ ಆತನಿಂದ ವಂಚನೆಗೊಳಗಾಗಿದ್ದರು ಎನ್ನಲಾಗುತ್ತಿದೆ.

ಕೆ.ಬಿ. ಈರಣ್ಣ ಮೂಲತಃ ಬೆಳಗಾವಿ ಜಿಲ್ಲೆಯವ. ದಾವಣಗೆರೆಯಲ್ಲಿ ಬೆಸ್ಕಾಂನಲ್ಲಿ ಬಿಲ್ ಕಲೆಕ್ಟರ್ ಆಗಿ ಮಾಡುತ್ತಿದ್ದು, ಬಂಬೂಬಜಾರ್‌ನಲ್ಲಿ ವಾಸವಾಗಿದ್ದನು. ಬಿಲ್ ಕಲೆಕ್ಟಿಂಗ್‌ಗೆಂದು ಹೋಗುತ್ತಿದ್ದ ಸಂದರ್ಭದಲ್ಲಿ ಆಶಾ ಮತ್ತು ಆತನ ನಡುವೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಆಶಾ ಎಸ್ಸೆಸ್ಸೆಲ್ಸಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಬ್ಯೂಟಿಪಾರ್ಲರ್ ಕೆಲಸ ಮಾಡುತ್ತಿದ್ದರು.

ಆಶಾಳಿಂದ ಈರಣ್ಣ 2 ಲಕ್ಷ ರೂಪಾಯಿ ಜೊತೆಗೆ ಚಿನ್ನಾಭರಣ ಪಡೆದುಕೊಂಡಿದ್ದನು. ಮದುವೆಯಾಗುವುದಾಗಿ ನಂಬಿಸಿದ್ದನು. ಈ ಮೊದಲೇ ಈರಣ್ಣನಿಗೆ ಮದುವೆಯಾಗಿರುವುದು ಈಚೆಗೆ ಗೊತ್ತಾಗಿದೆ. ತಾನು ಪ್ರೀತಿ ಮಾಡಿದವನೇ ಮೋಸ ಮಾಡಿದ್ದಾನೆ. ತಂದೆ-ತಾಯಿ ಹೇಳಿದರೂ ಕೇಳದೆ ಎಲ್ಲವನ್ನೂ ಕಳೆದುಕೊಂಡಿರುವ ನಾನು ಬದುಕಲು ಅರ್ಹತೆ ಇಲ್ಲ ಎಂದು ನಿರ್ಧರಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ