Home / ರಾಜಕೀಯ / ಪುಣೆಯ ಕಾರ್ಖಾನೆಯಲ್ಲಿ ಬೆಂಕಿ ಅವಘಡಕ್ಕೆ 18 ಮಂದಿ ಬಲಿ

ಪುಣೆಯ ಕಾರ್ಖಾನೆಯಲ್ಲಿ ಬೆಂಕಿ ಅವಘಡಕ್ಕೆ 18 ಮಂದಿ ಬಲಿ

Spread the love

ಪುಣೆ: ಇಲ್ಲಿನ ಮುಲ್ಶಿ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಢದಲ್ಲಿ 15 ಮಂದಿ ಮಹಿಳೆಯರು ಸೇರಿ 18 ಜನರು ಮೃತಪಟ್ಟಿದ್ದಾರೆ.
ಪಿರಂಗುಟ್ ಗ್ರಾಮದಲ್ಲಿರುವ ‘ಎಸ್‌ವಿಎಸ್‌ ಅಕ್ವಾ ಟೆಕ್ನಾಲಜೀಸ್’ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸುಮಾರು 20 ಮಂದಿ ಪಾರಾಗಿದ್ದಾರೆ. ಬೆಂಕಿಯಿಂದ ತೀವ್ರವಾಗಿ ಸುಟ್ಟಿದ್ದ ಶವಗಳನ್ನು ಹೊರತೆಗೆಯಲಾಗಿದೆ.

ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಬೆಂಕಿಯಿಂದಾಗಿ ವಾತಾವರಣವನ್ನು ದಟ್ಟ ಹೊಗೆ ಆವರಿಸಿತ್ತು. ಸ್ಥಳಕ್ಕೆ ಪುಣೆ ಜಿಲ್ಲಾಧಿಕಾರಿ ಡಾ.ರಾಜೇಶ್ ದೇಶಮುಖ್, ಪುಣೆ ಗ್ರಾಮಾಂತರ ಎಸ್‌ಪಿ ಡಾ. ಅಭಿನವ್ ದೇಶಮುಖ್ ಮತ್ತು ಇತರೆ ಹಿರಿಯ ಅಧಿಕಾರಿಗಳು ಧಾವಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ₹ 2 ಲಕ್ಷ, ಗಾಯಗೊಂಡವರಿಗೆ ₹ 50 ಸಾವಿರ ಪರಿಹಾರ ಘೋಷಿಸಿದೆ.

ಮಹಾರಾಷ್ಟ್ರ ಕೈಗಾರಿಕಾಭಿವೃದ್ಧಿ ನಿಗಮ ಮತ್ತು ಪುಣೆ ಮೆಟ್ರೊಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೂ ಸ್ಥಳಕ್ಕೆ ಧಾವಿಸಿದ್ದಾರೆ. ಮೃತದೇಹಗಳನ್ನು ಪುಣೆಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಕಾರ್ಖಾನೆಯಲ್ಲಿ ಒಟ್ಟು 37 ಮಂದಿ ಕಾರ್ಯನಿರ್ವಹಿಸುತ್ತಿದ್ದರು. 18 ಮಂದಿ ಮೃತಪಟ್ಟಿದ್ದು, ಉಳಿದವರನ್ನು ರಕ್ಷಣೆ ಮಾಡಲಾಗಿದೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ