ಬೆಂಗಳೂರು: ಜಿಂದಾಲ್ ಸಂಸ್ಥೆಗೆ 3,667 ಎಕರೆ ಭೂಮಿ ಪರಭಾರೆ ಮಾಡಿಕೊಡುವ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು.
ಕೆ.ಎ.ಪಾಲ್ ಎಂಬುವವರ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಕೋರ್ಟ್, ಅರ್ಜಿದಾರರ ಪಿಐಎಲ್ಗೆ ಉತ್ತರಿಸುವಂತೆ ರಾಜ್ಯ ಸರ್ಕಾರ, ಜಿಂದಾಲ್ ಸಂಸ್ಥೆಗೆ ನೋಟಿಸ್ ನೀಡಿದೆ. ಹೈಕೋರ್ಟ್ನ ಮುಖ್ಯ ವಿಭಾಗೀಯ ಪೀಠ ನೋಟಿಸ್ ನೀಡಿದೆ.
ಸಿಎಂ ಯಡಿಯೂರಪ್ಪ ವಿರುದ್ಧ ಅರ್ಜಿಯಲ್ಲಿ ಆರೋಪ ಮಾಡಲಾಗಿದೆ. ರಾಜ್ಯದಲ್ಲಿ ಸರ್ವಾಧಿಕಾರಿ ರೀತಿಯಲ್ಲಿ ಜಿಂದಾಲ್ಗೆ ಭೂಮಿಯನ್ನ ಪರಭಾರೆ ನಿರ್ಧಾರ ಮಾಡಲಾಗಿದೆ. ಕಾನೂನು ಬಾಹಿರವಾಗಿ ಭೂಮಿ ಪರಭಾರೆ ಮಾಡಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.
ಈ ಆರೋಪಕ್ಕೆ ಸರ್ಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದರು. ಹಾಗಾದ್ರೆ ಪರಭಾರೆ ಬಗ್ಗೆ ಸರ್ಕಾರದ ನಿಲುವು ತಿಳಿಸಲು ಕೋರ್ಟ್ ಸೂಚನೆ ನೀಡಿ, ಮುಂದಿನ ವಿಚಾರಣೆಯನ್ನ 15ಕ್ಕೆ ಮುಂದೂಡಿತು. ಇನ್ನು ಜಿಂದಾಲ್ಗೆ ಭೂಮಿ ಪರಭಾರೆ ಮಾಡೋದಕ್ಕೆ ತೀವ್ರ ವಿರೋಧ ಹಿನ್ನೆಲೆಯಲ್ಲಿ, ಸರ್ಕಾರ ಈ ನಿರ್ಧಾರವನ್ನ ಸದ್ಯ ಅಮಾನತಿನಲ್ಲಿಟ್ಟಿದೆ.