ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಈಗಾಗಲೇ ಮೈತ್ರಿ ಲಕ್ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಎರಡೂ ಬಾರಿಯೂ ಪೂರ್ಣಾವಧಿ ಅಧಿಕಾರ ನಡೆಸದೆ ಕೆಳಗೆ ಇಳಿದರು. ಹೀಗಿದ್ದರೂ 2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಸಿಎಂ ಗಾದಿಗೇರುವ ಕನಸಿನಲ್ಲಿದ್ದಾರೆ.
ಈ ಕನಸಿಗೆ ಬಲ ತುಂಬುವಂತೆ ಆಂಧ್ರ ಪ್ರದೇಶ ಮೂಲದ ಪ್ರಖ್ಯಾತ ಜೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ. “2023ರ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಆಗ ಎಚ್ಡಿಕೆ ಮತ್ತೆ ರಾಜ್ಯದ ಸಿಎಂ ಆಗುತ್ತಾರೆ. ಮುಂಬರುವ ಪಂಚಮಾಧಿಪತಿ ದೆಸೆಯಲ್ಲಿ ಅಧಿಕಾರ ನಿಶ್ಚಿತ” ಎಂದು ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.