Breaking News

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ವಾರ್ನಿಂಗ್; ಜೂನ್ 14ರ ಗಡುವಿನ ಅರ್ಥವೇನು.?

Spread the love

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡದಂತೆ ತಿಳಿಸಿದ್ದಾರೆ.

 

ನಾಯಕತ್ವ ಬದಲಾವಣೆ ಮಾತುಗಳು ಕೇಳುತ್ತಿದ್ದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವುದಾಗಿ ಹೇಳಿ ಹೊಸ ಬಾಂಬ್ ಸಿಡಿಸಿದ್ದರು. ಈ ಎಲ್ಲಾ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ನಾಯಕರ ಸಂಘರ್ಷಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಹೈಕಮಾಂಡ್, ನಾಯಕತ್ವ ಬದಲಾವಣೆ ಬಗ್ಗೆ ಸಚಿವರಾಗಲಿ, ಶಾಸಕರಾಗಲಿ, ಯಾರೂ ಕೂಡ ಜೂನ್ 14ರವರೆಗೆ ಹೇಳಿಕೆ ನೀಡುವಂತಿಲ್ಲ. ಸರ್ಕಾರದ ಹಾಗೂ ಪಕ್ಷದ ಇಮೇಜ್ ಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಸೂಚಿಸಿದೆ ಎನ್ನಲಾಗಿದೆ.

 

ಈ ಮೂಲಕ ಬಿಜೆಪಿ ಹೈಕಮಾಂಡ್ ತಾತ್ಕಾಲಿಕ ಕದನ ವಿರಾಮ ಘೋಷಿಸಿದ್ದು, ಆದರೆ ಜೂನ್ 14ರ ಬಳಿಕ ವರಿಷ್ಠರ ನಡೆಯೇನಿರಬಹುದು ಎಂಬುದು ಕುತೂಹಲ ಕೆರಳಿಸಿದೆ.


Spread the love

About Laxminews 24x7

Check Also

ಆರ್​ಟಿಒ ಅಧಿಕಾರಿಗಳಿಂದ 98 ಆಟೋಗಳು ಜಪ್ತಿ

Spread the loveಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ