Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಪತಿಯನ್ನೇ ಕೊಂದ ಪತ್ನಿ- ಪುತ್ರ, ಪ್ರಿಯತಮನ ಸಾಥ್

ಪತಿಯನ್ನೇ ಕೊಂದ ಪತ್ನಿ- ಪುತ್ರ, ಪ್ರಿಯತಮನ ಸಾಥ್

Spread the love

ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ  ಪ್ರಶ್ನಿಸಿದ್ದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

 

ಕುಮಾರ ರಾಮು ಖೋತ (39) ಮೃತನಾಗಿದ್ದಾನೆ. ಪತ್ನಿಯಿಂದ ಕೊಲೆಯಾದ ಈತ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ನಿವಾಸಿಯಾಗಿದ್ದನು. ಚಿಂಚಲಿ ಪಟ್ಟಣದ ಬಾಳೇಶ ಶ್ರೀಕಾಂತ ಹಾರೂಗೇರಿ, ಸಚಿನ್ ಕುಮಾರ ಖೋತ, ಗೀತಾ ಕುಮಾರ ಖೋತ, ಬೆಳಕೂಡ ಗ್ರಾಮದ ಅಪ್ಪಾಸಾಬ ಜಿನ್ನಾಪ್ಪಾ ತಪಕಿರೆ ಹಾಗೂ ಸಂತೋಷ ನೇಮಿನಾಥ ತಪಕಿರೆ ಬಂಧಿತ ಆರೋಪಿಗಳಾಗಿದ್ದಾರೆ.

ಮೃತ ಕುಮಾರ ರಾಮು ಖೋತ ಪತ್ನಿ ಗೀತಾ ಕುಮಾರ ಖೋತ ಕುಡಚಿ ಪೊಲೀಸ್ ಠಾಣೆಗೆ ಜೂ.02 ರಂದು ಬಂದು ಠಾಣೆಯಲ್ಲಿ ಪತಿಯ ಬಗ್ಗೆ ಪ್ರಕರಣ ದಾಖಲಿಸಿದ್ದಾಳೆ.ನನ್ನ ಪತಿ ಮೇ. 27 ರಂದು ಸಾವನಪ್ಪಿದ್ದು, ನನ್ನ ಪತಿಯನ್ನು ಯಾರೋ ಆರೋಪಿತರು ಯಾವುದೋ ಕಾರಣಕ್ಕಾಗಿ ಯಾವುದೋ ಆಯುಧದಿಂದ ತಲೆಗೆ ಹೊಡೆದು ಭಾರಿ ಗಾಯಪಡಿಸಿ ಕೊಲೆ ಮಾಡಿದ್ದಾರೆ. ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಬಿಳಿಯ ಪ್ಲಾಸ್ಟಿಕನಲ್ಲಿ ಕಟ್ಟಿ ಮೃತದೇಹವನ್ನು ಕೃಷ್ಣಾ ನದಿಯಲ್ಲಿ ಒಗೆದು ಸಾಕ್ಷಿ ನಾಶ ಮಾಡಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.ಕುಡಚಿ ಪೊಲೀಸರು ಐದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಸದ್ಯ ಆರೋಪಿತರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪೊಲೀಸರ ತನಿಖೆ ವೇಳೆ ಗೀತಾಗೆ ಚಿಂಚಲಿ ಗ್ರಾಮದ ಬಾಳೇಶ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದು, ಇದು ಕುಮಾರ ಖೋತನಿಗೆ ಗೊತ್ತಾಗಿ ಜಗಳ ಮಾಡಿದ್ದನು. ಈ ವೇಳೆ ಗೀತಾ ಪತಿಯ ಮೇಲೆ ಸಿಟ್ಟಾಗಿ ಮೃತನ ಹೆಂಡತಿ, ಮಗ ಸಚಿನ ಮತ್ತು ಬಾಳೇಶ ಹಾರೂಗೇರಿ ಕೂಡಿ ಕೊಲೆ ಸಂಚು ರೂಪಿಸಿ ಜೂ.27 ರಂದು ಕುಮಾರನಿಗೆ ಸಾರಾಯಿ ಕುಡಿಸಿ ಕಲ್ಲಿನಿಂದ ತಲೆಗೆ, ಎದೆಗೆ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಮೃತನ ಶವವನ್ನು ಮೃತನ ಮಗ ಸಚಿನ್ ಹಾಗೂ ಬಾಳೇಶ ಇಬ್ಬರೂ ತೆಗೆದುಕೊಂಡು ಹೋಗಿ ಸಾಕ್ಷಿ ಹಾಳು ಮಾಡಲು ಚಿಂಚಲಿ ಜಾಕವೆಲ್ ಹತ್ತಿರ ಕೃಷ್ಣಾ ನದಿಯಲ್ಲಿ ಎಸೆದು ಹೋಗಿದ್ದಾರೆ ಎಂದು ಪೊಲೀಸರ ಬಳಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಡಿಸಿಪಿ ಹೆಸರಲ್ಲೇ ನಕಲಿ ಫೇಸ್‌ಬುಕ್‌ ಖಾತೆ

Spread the love ಬೆಳಗಾವಿ: ಬೆಳಗಾವಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ ಅವರ ಹೆಸರಲ್ಲಿ ನಕಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ