Home / ರಾಜಕೀಯ / ಕಲಬುರಗಿ: ವರದಕ್ಷಿಣೆ ಕಿರುಕುಳ; 21 ವರ್ಷದ ಗೃಹಿಣಿ ನೇಣಿಗೆ ಶರಣು

ಕಲಬುರಗಿ: ವರದಕ್ಷಿಣೆ ಕಿರುಕುಳ; 21 ವರ್ಷದ ಗೃಹಿಣಿ ನೇಣಿಗೆ ಶರಣು

Spread the love

ಕಲಬುರಗಿ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ನೊಂದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ.

21 ವರ್ಷದ ರಚಿತಾ ಎಂಬುವವರೇ ಸಾವಿಗೆ ಶರಣಾದ ಗೃಹಿಣಿ. ಕಳೆದ ಎರಡೂವರೆ ವರ್ಷದ ಹಿಂದೆಯಷ್ಟೇ ವೀರಣ್ಣ ಎಂಬುವರ ಜೊತೆ ರಚಿತಾ ಮದುವೆಯಾಗಿತ್ತು.

ಸಿವಿಲ್ ಇಂಜಿನಿಯರ್ ಆಗಿರುವ ವೀರಣ್ಣ, ಮದುವೆ ಬಳಿಕ ಹಣಕ್ಕಾಗಿ ಪೀಡಿಸಿ ತೊಂದರೆ ಕೊಡುತ್ತಿದ್ದ ಎನ್ನಲಾಗಿದೆ. ಮಂಗಳವಾರ ಕೂಡ ಹಣ ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡಿ, ಗಲಾಟೆ ಮಾಡಿದ್ದ. ಇದರಿಂದ ಬೇಸತ್ತು ಮನೆಯಲ್ಲೇ ರಚಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಚಿತಾ ಸಾವು ಸಂಬಂಧ ಪತಿ ವೀರಣ್ಣ, ಮಾವ ಚಂದ್ರಕಾಂತ, ಅತ್ತೆ ಲಕ್ಷ್ಮಿಬಾಯಿ, ಮೈದುನ ಪವನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ