Breaking News

ಮುಂಗಾರು ಅಬ್ಬರ.ಮುಂಬಯಿಯಲ್ಲಿ ಧಾರಾಕಾರ ಮಳೆ; ಟ್ರಾಫಿಕ್ ಜಾಮ್, ರೈಲು ಸಂಚಾರ ವ್ಯತ್ಯಯ

Spread the love

ಮುಂಬಯಿ: ನಿಗದಿತ ಸಮಯಕ್ಕಿಂತ ಒಂದು ದಿನ ಮೊದಲೇ ಮುಂಗಾರು ಮಳೆ ಮುಂಬಯಿ ನಗರಿಯನ್ನು ಪ್ರವೇಶಿಸಿದ್ದು, ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಅಲ್ಲದೇ ಸ್ಥಳೀಯ ಬಸ್ ಮತ್ತು ರೈಲುಗಳ ಸಂಚಾರದ ಮೇಲೂ ಪರಿಣಾಮ ಬೀರಿರುವುದಾಗಿ ಬುಧವಾರ(ಜೂನ್ 09) ಅಧಿಕಾರಿಗಳು ತಿಳಿಸಿದ್ದಾರೆ.

 

ಇಂದು ಮುಂಬಯಿಗೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುಂಬಯಿ ಕಚೇರಿಯ ವರಿಷ್ಠ ಡಾ.ಜಯಂತ್ ಸರ್ಕಾರ್ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ನಿರೀಕ್ಷೆಗೂ ಮೀರಿ ಮಳೆಯಾಗಿದ್ದು, ಈ ಮೊದಲು ಜೂನ್ 3ರಂದು ಮುಂಗಾರು ಕೇರಳವನ್ನು ಪ್ರವೇಶಿಸಲಿದ್ದು, ಜೂನ್ 10ಕ್ಕೆ ಮುಂಬಯಿಗೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.

ಕಳೆದ 24ಗಂಟೆಯಲ್ಲಿ ಮುಂಬಯಿಯ ಕೊಲಾಬಾ ಪ್ರದೇಶದಲ್ಲಿ ದಾಖಲೆಯ 77 ಮಿಲಿ ಮೀಟರ್ ಮಳೆಯಾಗಿದೆ. ಇದೇ ಸಂದರ್ಭದಲ್ಲಿ ಸಾಂತಾಕ್ರೂಝ್ ಪ್ರದೇಶದಲ್ಲಿ 60 ಮಿಲಿ ಮೀಟರ್ ಮಳೆಯಾಗಿದೆ. ಮುಂಬಯಿ ಮಹಾನಗರ ಪಾಲಿಕೆ ಮಾಹಿತಿ ಪ್ರಕಾರ, ಮುಂಬೈ ನಗರದಲ್ಲಿ ದಾಖಲೆಯ 48.49 ಮಿ.ಮೀಟರ್ , ಪೂರ್ವ ಉಪನಗರದಲ್ಲಿ 66.99 ಮಿಲಿ ಮೀಟರ್ ಮತ್ತು ಪಶ್ಚಿಮ ಮುಂಬಯಿ ನಗರಿಯಲ್ಲಿ 48.99 ಮಿಲಿ ಮೀಟರ್ ಮಳೆಯಾಗಿರುವುದಾಗಿ ವರದಿ ತಿಳಿಸಿದೆ.

ಬೇಲಾಪುರದಲ್ಲಿ ಕೇವಲ ಆರು ಗಂಟೆಯಲ್ಲಿ ದಾಖಲೆಯ 152 ಮಿಲಿ ಮೀಟರ್ ಮಳೆ ಸುರಿದಿತ್ತು. ಚೆಂಬೂರ್ ನಲ್ಲಿ 125 ಮಿಲಿ ಮೀಟರ್, ಸೆಂಟ್ರಲ್ ಮುಂಬಯಿಯಲ್ಲಿ 112 ಮಿಲಿ ಮೀಟರ್ ಮಳೆಯಾಗಿರುವುದಾಗಿ ವರದಿ ವಿವರಿಸಿದೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ