Breaking News

ಹೋಮ, ಹವನ ಮಾಡಿದ್ದಕ್ಕೆ ಪ್ರಕರಣ ; ತಹಸೀಲ್ದಾರ್ ವಿರುದ್ಧ ಜನರ ಆಕ್ರೋಶ

Spread the love

ದಾವಣಗೆರೆ: ಅರಬಗಟ್ಟೆಯ ಕೋವಿಡ್ ಆರೈಕೆ ಸೆಂಟರ್​​ನಲ್ಲಿ ಶಾಸಕ ರೇಣುಕಾಚಾರ್ಯ ಹೋಮ, ಹವನ ಮಾಡಿದ್ದಕ್ಕೆ ಶಾಸಕರ ವಿರುದ್ದ ಪ್ರಕರಣ ದಾಖಲಿಸಲು ತಹಸೀಲ್ದಾರ್​​ ಮುಂದಾದ ಬೆನ್ನಲ್ಲೇ ತಾಲೂಕು ಆಡಳಿತದ ವಿರುದ್ಧ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್​​ನಲ್ಲಿ ಸೋಂಕಿತರಿಂದ ವಿರೋಧ ವ್ಯಕ್ತವಾಗಿದೆ.

ಸೋಂಕಿತರು ತಹಸೀಲ್ದಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಶಾಸಕರ ಶಾಂತನಗೌಡರ ಕುಮ್ಮಕ್ಕಿನಿಂದ ತಹಸೀಲ್ದಾರ್ ಅವರು ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.ಸೋಂಕಿತರ ಆಕ್ರೋಶಶಾಸಕ ರೇಣುಕಾಚಾರ್ಯ ಇಲ್ಲದೇ ಇದ್ದಾಗ ಕೋವಿಡ್​ ಕೇಂದ್ರದಲ್ಲಿ ಯಾವುದೇ ವ್ಯವಸ್ಥೆ ಸರಿಯಾಗಿರುವುದಿಲ್ಲ. ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆಯೂ ಇರುವುದಿಲ್ಲ. ಸ್ಥಳಕ್ಕೆ ತಹಸೀಲ್ದಾರ್ ಬರುವವರೆಗೂ ಊಟ ಮಾಡುವುದಿಲ್ಲ ಎಂದು ಸೋಂಕಿತರು ಪಟ್ಟು ಹಿಡಿದಿದ್ದರು.


Spread the love

About Laxminews 24x7

Check Also

ನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ

Spread the loveನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ ಬಂದವರಿಗೆಲ್ಲ ಭೋಜನದ ವ್ಯವಸ್ಥೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ