Breaking News
Home / ರಾಜಕೀಯ / ಹೋಮ, ಹವನ ಮಾಡಿದ್ದಕ್ಕೆ ಪ್ರಕರಣ ; ತಹಸೀಲ್ದಾರ್ ವಿರುದ್ಧ ಜನರ ಆಕ್ರೋಶ

ಹೋಮ, ಹವನ ಮಾಡಿದ್ದಕ್ಕೆ ಪ್ರಕರಣ ; ತಹಸೀಲ್ದಾರ್ ವಿರುದ್ಧ ಜನರ ಆಕ್ರೋಶ

Spread the love

ದಾವಣಗೆರೆ: ಅರಬಗಟ್ಟೆಯ ಕೋವಿಡ್ ಆರೈಕೆ ಸೆಂಟರ್​​ನಲ್ಲಿ ಶಾಸಕ ರೇಣುಕಾಚಾರ್ಯ ಹೋಮ, ಹವನ ಮಾಡಿದ್ದಕ್ಕೆ ಶಾಸಕರ ವಿರುದ್ದ ಪ್ರಕರಣ ದಾಖಲಿಸಲು ತಹಸೀಲ್ದಾರ್​​ ಮುಂದಾದ ಬೆನ್ನಲ್ಲೇ ತಾಲೂಕು ಆಡಳಿತದ ವಿರುದ್ಧ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್​​ನಲ್ಲಿ ಸೋಂಕಿತರಿಂದ ವಿರೋಧ ವ್ಯಕ್ತವಾಗಿದೆ.

ಸೋಂಕಿತರು ತಹಸೀಲ್ದಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಶಾಸಕರ ಶಾಂತನಗೌಡರ ಕುಮ್ಮಕ್ಕಿನಿಂದ ತಹಸೀಲ್ದಾರ್ ಅವರು ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.ಸೋಂಕಿತರ ಆಕ್ರೋಶಶಾಸಕ ರೇಣುಕಾಚಾರ್ಯ ಇಲ್ಲದೇ ಇದ್ದಾಗ ಕೋವಿಡ್​ ಕೇಂದ್ರದಲ್ಲಿ ಯಾವುದೇ ವ್ಯವಸ್ಥೆ ಸರಿಯಾಗಿರುವುದಿಲ್ಲ. ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆಯೂ ಇರುವುದಿಲ್ಲ. ಸ್ಥಳಕ್ಕೆ ತಹಸೀಲ್ದಾರ್ ಬರುವವರೆಗೂ ಊಟ ಮಾಡುವುದಿಲ್ಲ ಎಂದು ಸೋಂಕಿತರು ಪಟ್ಟು ಹಿಡಿದಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ