Breaking News

ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್​ ವಾಲಾ ಕೊರೊನಾ ಪರೀಕ್ಷೆ

Spread the love

ಬೆಂಗಳೂರು: ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್​ ವಾಲಾ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಕಳೆದ ಶುಕ್ರವಾರ, ಯಡಿಯೂರಪ್ಪ ರಾಜ್ಯಪಾಲರನ್ನ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವಜೂಭಾಯ್ ವಾಲಾ, ಅವರ ಆಪ್ತ ಸಹಾಯಕ ಹಾಗೂ ಏಡ್ ಡಿ ಕ್ಯಾಮ್(ಎಡಿಸಿ) ಕೊರೊನಾ ಟೆಸ್ಟ್​​ ಮಾಡಿಸಿಕೊಂಡಿದ್ದಾರೆ. ಮೂವರ ವರದಿಯಲ್ಲೂ ಕೊರೊನಾ ನೆಗೆಟಿವ್ ಬಂದಿದೆ ಎಂದು ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ರಾಜ್ಯಪಾಲರ ಆಪ್ತ ಸಹಾಯಕರ ಲೆಟರ್ ಹೆಡ್‌ನಲ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಗೃಹ ಸಚಿವರ ಕೊರೊನಾ ವರದಿ ನೆಗೆಟಿವ್:ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಹಿನ್ನೆಲೆ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಱಪಿಡ್​ ಆ್ಯಂಟಿಜೆನ್ ಟೆಸ್ಟ್​​ಗೆ ಒಳಗಾಗಿದ್ದಾರೆ. ಅವರ ವರದಿಯಲ್ಲಿ ಸೋಂಕು ತಗುಲಿಲ್ಲ ಎಂದು ದೃಢಪಟ್ಟಿದೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ