Breaking News

ನಾಯಕತ್ವ ಬದಲಾವಣೆ ಚರ್ಚೆ | ದೆಹಲಿಗೆ ಅರವಿಂದ ಬೆಲ್ಲದ್; ವರಿಷ್ಠರ ಭೇಟಿ ಸಾಧ್ಯತೆ

Spread the love

ನವದೆಹಲಿ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಶುಕ್ರವಾರ ತಡರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ದೌಡಾಯಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬೆಲ್ಲದ್ ಅವರ ದೆಹಲಿಯ ದಿಢೀರ್‌ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಬೆಲ್ಲದ್ ಅವರು ಸಚಿವ ಸಿ.ಪಿ. ಯೋಗೇಶ್ವರ್ ಅವರೊಂದಿಗೆ ಮೇ ಮೂರನೇ ವಾರ ದೆಹಲಿಗೆ ಬಂದಿದ್ದರು. ಆಗ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಬೇಕೆಂಬ ಅವರ ಪ್ರಯತ್ನಗಳು ಫಲಿಸಿರಲಿಲ್ಲ ಎನ್ನಲಾಗಿತ್ತು.

ಇದೀಗ ಬೆಲ್ಲದ್ ಅವರೊಂದಿಗೆ ಯೋಗೇಶ್ವರ್ ಹಾಗೂ ಇತರ‌ ಕೆಲವು ಸಮಾನ‌ ಮನಸ್ಕ ಶಾಸಕರೂ ದೆಹಲಿಗೆ ಬಂದಿದ್ದಾರೆ ಎನ್ನಲಾಗಿದ್ದು, ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಚರ್ಚೆಗಾಗಿ ಮತ್ತೆ ವರಿಷ್ಠರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ ಎಂದು ತಿಳಿದುಬಂದಿದೆ.

 


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ