Breaking News

ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ

Spread the love

ತುಮಕೂರು/ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತುಮಕೂರಿನಲ್ಲಿ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದರು.

ರಾಜ್ಯಾದ್ಯಂತ ಜಿಲ್ಲಾ ಪಂಚಾಯಿತಿ ಹಾಗೂ ಹೋಬಳಿ ಮಟ್ಟದಲ್ಲಿ ನಡೆಯುತ್ತಿರುವ ತೈಲ ಬೆಲೆ ಏರಿಕೆ ವಿರುದ್ದದ 100 ನಾಟೌಟ್ ಪ್ರತಿಭಟನೆ ಬಗ್ಗೆ ಜೂಮ್ ವಿಡಿಯೋ ಸಂವಾದದ ಮೂಲಕ ಪರಿಶೀಲನೆ ನಡೆಸಿ, ಸಲಹೆ-ಸೂಚನೆಗಳನ್ನು ನೀಡಿದರು.

ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಐದು ದಿನಗಳ ಹೋರಾಟದ ಮೂರನೇ ದಿನವಾದ ಇಂದು ತಿಪಟೂರಿನ ಕಿಬ್ಬನಹಳ್ಳಿ ಕ್ರಾಸ್ ನಲ್ಲಿ ಆಯೋಜಿಸಿರುವ ಪ್ರತಿಭಟನೆಗೆ ತೆರಳುವ ಮಾರ್ಗದಲ್ಲಿ ಶಿವಕುಮಾರ್ ಅವರು ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.

ಅವರ ನಿವಾಸದಲ್ಲಿ ಉಪಾಹಾರ ಸೇವಿಸಿದರು. ಕುಣಿಗಲ್ ಶಾಸಕ ಡಾ. ರಂಗನಾಥ್, ಮುರಳೀಧರ ಹಾಲಪ್ಪ ಮತ್ತಿತರರು ಜತೆಗಿದ್ದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ