ಬೆಂಗಳೂರು: ಸಿ.ಡಿ ಕೇಸ್ಗೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ನಿನ್ನೆ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ವಿಚಾರಣೆ ನಡೆದಿದೆ. ಅದರ ಬೆನ್ನಲ್ಲೇ ಆರೋಪಿಗಳಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಎಸ್ಐಟಿ ನೋಟಿಸ್ ನೀಡಿದೆ.
ವಿಶೇಷ ಎಂದರೆ ನಿನ್ನೆ ಒಟ್ಟಿಗೆ ವಿಚಾರಣೆಗೆ ಹಾಜರಾಗಿದ್ದ ಇಬ್ಬರು ಆರೋಪಿಗಳಿಗೆ ನೋಟಿಸ್ ನೀಡಿರುವ ಪೊಲೀಸರು, ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಕರೆದಿದ್ದಾರೆ. ಜೂನ್ 14ರ ಸೋಮವಾರ 11 ಗಂಟೆಗೆ ಆರೋಪಿ ನರೇಶ್ಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಇನ್ನು ಜೂನ್ 15ರ ಮಂಗಳವಾರ 11 ಗಂಟೆಗೆ ಹಾಜರಾಗುವಂತೆ ಆರೋಪಿ ಶ್ರವಣ್ಗೆ ನೋಟಿಸ್ ನೀಡಿದ್ದಾರೆ.
ನಿನ್ನೆ ಹಿರಿಯ ಅಧಿಕಾರಿಗಳು ನೀಡಿದ ಸಲಹೆ ಆಧಾರದಲ್ಲಿ ನಡೆದ ವಿಚಾರಣೆಯಲ್ಲಿ ಈಗಾಗಲೇ ಅರೋಪಿಗಳು ತಮ್ಮ ವಕೀಲರ ಜೊತೆ ಸಮಾಲೋಚನೆ ನಡೆಸಿರುವಂತೆಯೇ.. ವಕೀಲರು ನೀಡಿರುವ ಸಲಹೆಯಂತೆಯೇ ಉತ್ತರ ನೀಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.