Breaking News

ಸೆಕೆಂಡ್ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Spread the love

ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಜ್ಞಾನ-ವಿಜ್ಞಾನ ತರಂಗದ ಮೂಲಕ ಆನ್ಲೈನ್ ಕ್ಲಾಸ್ ಮೂಲಕ ತರಬೇತಿ ನೀಡಲಾಗುತ್ತದೆ.

 

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿಗೆ ತಯಾರಾಗಲು ಯೋಜನೆ ರೂಪಿಸಲಾಗಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ವಿಷಯದಲ್ಲಿ ತಲಾ 25 ಅಧಿವೇಷನ, ತಲಾ ಒಂದು ಪ್ರಶ್ನೆ ಪತ್ರಿಕೆ ಬಿಡಿಸುವಿಕೆ ಇರಲಿದೆ. ಇಂದಿನಿಂದ ಜ್ಞಾನ – ವಿಜ್ಞಾನ ತರಂಗ ಕಾರ್ಯಕ್ರಮ ವೀಕ್ಷಿಸಬಹುದಾಗಿದ್ದು, ಪ್ರತಿದಿನ ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ ನೇರ ಪ್ರಸಾರವಾಗಲಿದೆ. 100 ಕ್ಕೂ ಹೆಚ್ಚು ವಿಷಯ ತಜ್ಞರು ತರಬೇತಿ ನೀಡಲಿದ್ದಾರೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ