Breaking News

ಲಕ್ಷಾಂತರ ರೂ.ಮೌಲ್ಯದ ನಕಲಿ ರಸಗೊಬ್ಬರ ಸಾಗಾಣಿಕೆ: ಪೊಲೀಸರು-ಅಧಿಕಾರಿಗಳ ದಾಳಿ

Spread the love

ಗಂಗಾವತಿ: ನಕಲಿ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮಾರಾಟ ಪ್ರಕರಣಗಳು ಹೆಚ್ಚುತ್ತಿದ್ದು ,ಗಂಗಾವತಿಯಲ್ಲಿ ಕೃಷಿ ಜಾಗೃತದಳ ಹಾಗೂ ಪೊಲೀಸರು ದಾಳಿ ನಡೆಸಿ ಸುಮಾರು 300 ಚೀಲ (15 ಟನ್) ಜೈಕಿಸಾನ್ ರಸಗೊಬ್ಬರದ ಚೀಲಗಳಲ್ಲಿ ತುಂಬಿದ್ದ ಡಿಎಪಿ ರಸಗೊಬ್ಬರ ವಶಕ್ಕೆ ಪಡೆದು ಪರೀಕ್ಷೆ ನಡೆಸಲು ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕೃಷಿ ಜಾಗೃತ ದಳದ ಅಧಿಕಾರಿಗಳಾದ ಎಡಿಎ ಸಂತೋಷ ಪಟ್ಟದಕಲ್ಲು, ತಾಂತ್ರಿಕ ಅಧಿಕಾರಿ ಲಿಂಗಪ್ಪ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ ನೇತೃತ್ವದಲ್ಲಿ ದಾಳಿ ನಡೆಸಿ ಲಾರಿ ಸಮೇತ ನಕಲಿ ಡಿಎಪಿ ಜೈಕಿಸಾನ್ ಕಂಪನಿಯ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಗಂಗಾ ಎಂಟರ್ ಪ್ರೈಸಸ್ ಹಾಗೂ ಮಾರುತಿ ಆಗ್ರೋ ಫರ್ಟಿಲೈಜರ್ಸ್ ರಸಗೊಬ್ಬರ ಅಂಗಡಿಗಳ ರಸೀದಿಗಳು ಕೂಡಾ ದೊರಕಿವೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ