Breaking News

ಕೊನೆಗೂ ಜಾರಿಯಾಯ್ತು ರೋಹಿಣಿ ಸಿಂಧೂರಿ ಆದೇಶ.. ಭೂಗಳ್ಳರಲ್ಲಿ ನಡುಕ

Spread the love

ಮೈಸೂರು: ಭೂ ಕಬಳಿಕೆ ಪ್ರಕರಣ ಸಂಬಂಧ ಕೊನೆಗೂ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಆದೇಶ ಜಾರಿಯಾಗಿದೆ.

ನಿರ್ಗಮಿತ ಡಿಸಿ ರೋಹಿಣಿ ಆದೇಶದಿಂದ ನಗರಾಭಿವೃದ್ಧಿ ಪ್ರಾಧಿಕಾರ ಎಚ್ಚೆತ್ತಿದ್ದು, ಮೂಡಾದಿಂದ ಇಂದು ಕೇರ್ಗಳ್ಳಿಯಲ್ಲಿ ಅನಧಿಕೃತ ಒತ್ತುವರಿ ತೆರವು ಮಾಡಲಾಗ್ತಿದೆ. ಕೇರ್ಗಳ್ಳಿ ಸರ್ವೆ ನಂಬರ್​ 115ರಲ್ಲಿ ಒತ್ತುವರಿ ಆಗಿದೆ ಎನ್ನಲಾಗಿದ್ದು, ಆರ್​ಟಿಸಿಯಲ್ಲಿ 61 ಎಕರೆ ಹೆಚ್ಚುವರಿಯಾಗಿ ಭೂಮಿ ದಾಖಲಾಗಿದೆ. ಆರ್.ಟಿ.ನಗರ ಬಡಾವಣೆ ಉದ್ದೇಶಕ್ಕಾಗಿ ಮೂಡಾ ಭೂಮಿ ಸ್ವಾಧೀನಪಡಿಸಿಕೊಂಡಿದ್ದು, ಖಾಸಗಿಯವರು ಅನಧಿಕೃತವಾಗಿ ಅನುಭವದಲ್ಲಿರುವುದು ಪತ್ತೆಯಾಗಿದೆ.

ಹೀಗಾಗಿ ಭೂ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ ಕೈಗೊಂಡು, ಹೆಚ್ಚುವರಿಯಾಗಿ 61.18 ಎಕರೆ ವಿಸ್ತೀರ್ಣವನ್ನ ಆರ್​.ಟಿ.ಸಿಯಿಂದ ರದ್ದುಪಡಿಸುವಂತೆ ಕೋರಲಾಗಿತ್ತು. ಅದ್ರಂತೆ ಕೆಲವು ಕ್ರಮಗಳನ್ನ ಸೂಚಿಸಿ ರೋಹಿಣಿ ಸಿಂಧೂರಿ ಆದೇಶಿಸಿದ್ದರು.

ಇಂದು ಸ್ಥಳ ತನಿಖೆಗೆ ತೆರಳುತ್ತಿರುವ ಮೂಡಾ ಅಧಿಕಾರಿಗಳು, ಹಕ್ಕು ಸಮರ್ಥಿಸುವ ನೈಜ ದಾಖಲೆ ಒದಗಿಸಲು ಭೂ ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಇದರಿಂದ ಈಗ ಭೂಗಳ್ಳರಲ್ಲಿ ನಡುಕ ಶುರುವಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ