Breaking News

ಬ್ರಾಹ್ಮಣರ ವಿರುದ್ಧ ಅವಹೇಳನ ಆರೋಪ: ವಿಚಾರಣೆಗೆ ಹಾಜರಾದ ನಟ ಚೇತನ್

Spread the love

ಬೆಂಗಳೂರು: ಬ್ರಾಹ್ಮಣರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಕೇಸ್​ ದಾಖಲಾಗಿರೋ ಹಿನ್ನೆಲೆ, ಇಂದು ನಟ ಚೇತನ್ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣ ಸಂಬಂಧ ಬಸವನಗುಡಿ ಪೊಲೀಸ್ರು ಚೇತನ್​ಗೆ ನೋಟೀಸ್ ನೀಡಿದ್ದರು. ಹೀಗಾಗಿ ತಮ್ಮ ಸ್ನೇಹಿತರು ಹಾಗೂ ವಕೀಲರ ಜೊತೆ ಚೇತನ್ ಇಂದು ಬಸವನಗುಡಿ ಇನ್ಸ್​ಪೆಕ್ಟರ್ ಆರ್. ರಮೇಶ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಚೇತನ್ ವಿರುದ್ಧ ದೂರು ನೀಡಿದ್ದರು. ಇದರ ಅನ್ವಯ ಬಸವನಗುಡಿ ಪೊಲೀಸರು ಎಫ್​ಐಆರ್​​ ದಾಖಲಿಸಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚೇತನ್​ಗೆ ಸೂಚಿಸಿದ್ದರು.

ಕಳೆದ ಒಂದುವರೆ ಗಂಟೆಯಿಂದಲೂ ಚೇತನ್​​ರ ವಿಚಾರಣೆ ನಡೆಸುತ್ತಿರುವ ಪೊಲೀಸರು, ಫೇಸ್ ಬುಕ್​ನಲ್ಲಿ ಹಾಕಿರೋ ಪೋಸ್ಟ್ಗಳ ಬಗ್ಗೆ ಮಾಹಿತಿ ಕಲೆ ಹಾಕ್ತಿದ್ದಾರೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ