Breaking News

‘ಬಿಎಸ್‌ವೈ ಪದಚ್ಯುತಗೊಳಿಸಿದರೆ ಪರಿಣಾಮ ನೆಟ್ಟಗಿರಲ್ಲ’

Spread the love

ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಪದ
ಚ್ಯುತಗೊಳಿಸಬಾರದು. ಒಂದೊಮ್ಮೆ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬಂದರೆ ರಾಜ್ಯದ ಸಾವಿರ
ಮಠಾಧೀಶರು ದೆಹಲಿಯ ಸಂಸತ್ತಿನ
ಎದುರು ಮೆರವಣಿಗೆ ನಡೆಸಬೇಕಾ
ಗುತ್ತದೆ’ ಎಂದು ಇಲ್ಲಿಯ ಸುಲಫಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಎಚ್ಚರಿಸಿದರು.

ಈ ಕುರಿತು ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಎಂಬುದು ಬಿಜೆಪಿ ಪಕ್ಷದ ಆಂತರಿಕ ವಿಚಾರ ಎಂದುಕೊಂಡು ಸುಮ್ಮನಿರಲು ಆಗುವು
ದಿಲ್ಲ. ಎಲ್ಲ ಸಮುದಾಯಗಳ ಏಳಿಗೆಗಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರು ರಾಜ್ಯದಲ್ಲಿ ಬೇರುಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹಾಗಾಗಿ, ಅವರಿಗೆ ಅವಧಿ ಪೂರ್ಣಗೊಳಿಸಲು ಬಿಡಬೇಕು. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ’ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ