Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ: ರಮೇಶ್​ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ: ರಮೇಶ್​ ಜಾರಕಿಹೊಳಿ

Spread the love

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪರೇ ಮುಖ್ಯಮಂತ್ರಿ ಆಗಿರ್ತಾರೆ ಹಾಗೂ ಮುಂದಿನ ಚುನಾವಣೆಯನ್ನೂ ನಾವು ಯಡಿಯೂರಪ್ಪರ ಸಮ್ಮುಖದಲ್ಲೇ ಎದುರಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ನಾವು ಯಡಿಯೂರಪ್ಪ ಹಾಗೂ ಅಮಿತ್​ ಷಾರನ್ನ ನಂಬಿಯೇ ಬಿಜೆಪಿಗೆ ಬಂದಿದ್ದೇವೆ. ಬಿಜೆಪಿಯ ಎಲ್ಲಾ ಶಾಸಕರೂ ಒಂದು ಕುಟುಂಬದವರಂತೆ ಇದ್ದೇವೆ. ಯಡಿಯೂರಪ್ಪ ಎಲ್ಲರನ್ನೂ ಕರೆದು ಒಮ್ಮೆ ಮಾತನಾಡಬೇಕು ಎಂದು ನಾನು ಅವರಲ್ಲಿ ಮನವಿ ಮಾಡುತ್ತೇನೆ.

ಸಿ.ಪಿ ಯೋಗೀಶ್ವರ್​ ಈಗಲೂ ನನ್ನ ಸ್ನೇಹಿತ. ಮಾಧ್ಯಮಗಳ ಮೂಲಕ ನಾನು ಅವನಲ್ಲಿ ಮನವಿ ಮಾಡುಕೊಳ್ಳುತ್ತಿದ್ದೇನೆ. ಏನಾದರೂ ತಪ್ಪು ಗ್ರಹಿಕೆ ಆಗಿದ್ದಲ್ಲಿ ಕೂತು ಸರಿ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ರು.


Spread the love

About Laxminews 24x7

Check Also

ಬೆಳಗಾವಿ: ಡಿಸಿಪಿ ಹೆಸರಲ್ಲೇ ನಕಲಿ ಫೇಸ್‌ಬುಕ್‌ ಖಾತೆ

Spread the love ಬೆಳಗಾವಿ: ಬೆಳಗಾವಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ ಅವರ ಹೆಸರಲ್ಲಿ ನಕಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ