ಬೆಂಗಳೂರು(): ವಿದೇಶಗಳಿಂದ ಭಾರತಕ್ಕೆ ಯಾರೇ ಬಂದ್ರೂ ಅತಿಥಿ ದೇವೋ ಭವ ಅಂತ ನಮ್ಮವರು ನಡೆಸಿಕೊಳ್ತಾರೆ. ಅದರಲ್ಲೂ ಕರ್ನಾಟಕದ ಮಂದಿ ಬಂದವರ ಜೊತೆ ಬೆರೆತು ಹೋಗ್ತಾರೆ. ಅಂತಹ ಕನ್ನಡಿಗರ ಕಣ್ಣಿಗೆ ಒಂದಷ್ಟು ವಿದೇಶಿಯರು ಈಗ ವಿಲನ್ಗಳಾಗಿದ್ದಾರೆ. ಅರೇ ಯಾರವರು ಅಂತೀರಾ ಸ್ಟೋರಿ ಓದಿ.
ಹೌದು, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನೈಜಿರಿಯನ್ ಪ್ರಜೆಗಳ ಕಿರಿಕ್ ಇದೇನು ಮೊದಲೇನಲ್ಲ. ಸದಾ ಒಂದಿಲ್ಲೊಂದು ಕಿರಿಕ್ ಮಾಡ್ತಾನೆ ಇರ್ತಾರೆ. ಆದ್ರೆ ಇವ್ರ ಕಿರಿಕ್ ನ್ನು ಪದೇ ಪದೇ ಸಹಿಸಿಕೊಳ್ಳುತ್ತಿದ್ದ ರಾಜಧಾನಿ ಜನರು ಈಗ ತಿರುಗಿ ಬಿದ್ದಿದ್ದಾರೆ. ಹೌದು ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಣ್ಣ ಬಡಾವಣೆಯಲ್ಲಿ ವೀಕೆಂಡ್ ಆದ್ರೆ ಸಾಕು ನೈಜೀರಿಯಾ ಪ್ರಜೆಗಳ ಅವಾಂತರ ಹೇಳತೀರದು. ಮೊನ್ನೆ ರಸ್ತೆಯಲ್ಲಿಯೇ ಪಾರ್ಟಿ ಮಾಡಿರುವ ವ್ಯಕ್ತಿಗಳು ರಾತ್ರಿ ಇಡೀ ಅಲ್ಲಿದ್ದವರಿಗೆ ಹಾವಳಿ ಇಟ್ಟಿದ್ದಾರೆ.