Breaking News
Home / ಜಿಲ್ಲೆ / ಬೆಳಗಾವಿ / ರಮೇಶ್‌ ಜಾರಕಿಹೊಳಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರಿಂದ ಒಂಟೆ ಮೇಲೇರಿ ಪ್ರತಿಭಟನೆ

ರಮೇಶ್‌ ಜಾರಕಿಹೊಳಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರಿಂದ ಒಂಟೆ ಮೇಲೇರಿ ಪ್ರತಿಭಟನೆ

Spread the love

ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು’ ಎಂದು ಆಗ್ರಹಿಸಿ ಘಟಪ್ರಭಾದ ಅವರ ಬೆಂಬಲಿಗರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಒಂಟೆಗಳ ಮೇಲೆ ಮೆರವಣಿಗೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು.

‘ನಮ್ಮ ನಾಯಕರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಅವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಕೆಲಸಗಳು ತೆರೆ-ಮರೆಯಲ್ಲಿ ನಡೆಯುತ್ತಿವೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಹೆಸರು ಕೆಡಿಸುವಂತಹ ಪ್ರಯತ್ನಗಳನ್ನು ಕೆಲವರು ಮಾಡುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು ನಿರಾಧಾರವಾಗಿವೆ. ಹೀಗಾಗಿ, ಬಿಜೆಪಿ ಹೈಕಮಾಂಡ್‌ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು. ಈ ಕುರಿತು ಅವರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಬಿಜೆಪಿ ಮುಖಂಡರಾದ ಅಶೋಕಕುಮಾರ ಅಸೋದೆ, ಶಿವಾನಂದ ಚೌಕಸಿ ನೇತೃತ್ವ ವಹಿಸಿದ್ದರು


Spread the love

About Laxminews 24x7

Check Also

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಶ್ಯಾಮ್‌ಸುಂದರ್‌ ಗಾಯಕವಾಡ್

Spread the loveಬೆಂಗಳೂರು: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ’ ಎಂದು ಬಿಜೆಪಿ ರಾಜ್ಯ ಒಬಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ