Breaking News

ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ

Spread the love

ಬೆಂಗಳೂರು: ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೋವಿಡ್ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತುಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕ ಪರಿಸ್ಥಿತಿ ನೆಲೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ