Breaking News
Home / ಜಿಲ್ಲೆ / ಬಿಜಾಪುರ / ನಾಯಕತ್ವ ಬದಲಾವಣೆ ಧ್ವನಿ ಎತ್ತಿ ಉಸ್ತುವಾರಿ ಬಂದ್ರೂ ಭೇಟಿಯಾಗದ ಯತ್ನಾಳ್

ನಾಯಕತ್ವ ಬದಲಾವಣೆ ಧ್ವನಿ ಎತ್ತಿ ಉಸ್ತುವಾರಿ ಬಂದ್ರೂ ಭೇಟಿಯಾಗದ ಯತ್ನಾಳ್

Spread the love

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ನಾನು ಅವಕಾಶ ಕೇಳಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಾಸಕರು, ಸಚಿವರು, ನಾಯಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅನೇಕರು ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ಹೇಳಿದ್ದು, ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾತ್ರ ಅರುಣ್ ಸಿಂಗ್ ಭೇಟಿಗೆ ಸಮಯವನ್ನು ಕೇಳಿಲ್ಲ.

ನಾಯಕತ್ವ ಬದಲಾವಣೆ ಬಗ್ಗೆ ಧ್ವನಿಯೆತ್ತಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಉಸ್ತುವಾರಿ ರಾಜ್ಯಕ್ಕೇ ಬಂದರೂ ಭೇಟಿಯಾಗದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಬಸವನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಎರಡು ತಿಂಗಳ ಹಿಂದೆಯೇ ಕ್ರಮಕೈಗೊಳ್ಳಲಾಗಿದೆ ಎಂದು ನಿನ್ನೆಯಷ್ಟೇ ಅರುಣ್ ಸಿಂಗ್ ಹೇಳಿದ್ದರು.


Spread the love

About Laxminews 24x7

Check Also

ಬೆಳಗಾವಿ ಲೋಕಸಭಾ ಚುನಾವಣೆಗೆ ಒಪ್ತಾರಾ ಯತ್ನಾಳ್? ಏನು ಬಿಎಲ್ ಸಂತೋಷ್ ತಂತ್ರಗಾರಿಕೆ?

Spread the loveಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಬೆಳಗಾವಿಯ ಬಿಜೆಪಿ ಅಭ್ಯರ್ಥಿ (Belagavi …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ