Breaking News

ಬಿ.ಎಸ್.ಯಡಿಯೂರಪ್ಪ ಅವರು ನಿವೃತ್ತಿ ಪಡೆಯುವ ಸಮಯ ಬಂದಿದೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Spread the love

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ನಿವೃತ್ತಿ ಪಡೆಯುವ ಸಮಯ ಬಂದಿದೆ ಎಂದು ಕೂಡಲಸಂಗಮ ಪಂಚಮಸಾಲಿಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಈ ಹಿಂದೆ ಶ್ರೀಗಳು ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಿದ್ದರು.

ಕೇಂದ್ರ ನಾಯಕತ್ವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕಿಳಿಸಿದರೆ, ಪಕ್ಷವನ್ನು ಹೃದಯಾಳದಿಂದ ಸ್ವಾಗತಿಸುತ್ತೇವೆ. ಯಡಿಯೂರಪ್ಪ ಅವರ ವಯಸ್ಸಿನಿಂದಾಗಿ ಹಲವರಿಗೆ ಅಧಿಕಾರ ತಪ್ಪಿ ಹೋಗುತ್ತಿದೆ. ಹೀಗಾಗಿ ಅವರು ನಿವೃತ್ತಿ ಪಡೆದುಕೊಳ್ಳಲು ಸಮಯ ಬಂದಿದೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರು ನಾಲ್ಕು ಬಾರಿ ಮುಖ್ಯಮಂತ್ರಿಗಳಾಗಿದ್ದಾರೆ. ಸಮುದಾಯದ ಬೆಂಬಲವನ್ನು ಪಡೆದುಕೊಂಡಿದ್ದರು. ಆದರೆ, ಜನರ ಸಾಲವನ್ನು ಮರುಪಾವತಿಮಾಡುತ್ತಿಲ್ಲ. ನಾಯಕತ್ವ ಕಸಿದುಕೊಳ್ಳುವ ಸಾಮರ್ಥ್ಯವಿರುವ ಪಂಚಮಸಾಲಿ ಸಮುದಾಯವನ್ನೇ ಒಡೆಯಲು ಯಡಿಯೂರಪ್ಪ ಅವರು ಯತ್ನಿಸುತ್ತಿದ್ದಾರೆಂದು ತಿಳಿಸಿದ್ದಾರೆ


Spread the love

About Laxminews 24x7

Check Also

ಮಕ್ಕಳ ಹಕ್ಕುಗಳ ರಕ್ಷಣೆ ಪೊಲೀಸರ ಆದ್ಯ ಕರ್ತವ್ಯ; ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಲು ಪೊಲೀಸರಿಗೆ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕರೆ

Spread the loveಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಯ ಉಲ್ಲಂಘನೆ ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಿ, ವರದಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ