Breaking News

ಜೈಲಿನಿಂದ ಫೋನ್ ಕರೆ; ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ತನಿಖೆಗೆ ಸಿದ್ಧತೆ

Spread the love

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಶಾಸಕ ಬೆಲ್ಲದ್ ಅವರಿಗೆ ಜೈಲಿನಲ್ಲಿರುವ ಯುವರಾಜ ಸ್ವಾಮಿ ಎಂಬುವವರಿಂದ ಕರೆ ಬಂದಿದ್ದು, ಫೋನ್ ಕದ್ದಾಲಿಕೆ ಮಾಡುತ್ತಿರುವ ಬಗ್ಗೆ ಸ್ವತಃ ಶಾಸಕರು ಆರೋಪಿಸಿದ್ದರು. ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವಂತೆ ಡಿಜಿ, ಐಜಿಪಿ ಕಚೇರಿಯಿಂದ ಪತ್ರ ಬಂದಿದ್ದು, ಸೂಚನೆ ಮೇರೆಗೆ ತನಿಖೆ ನಡೆಸಲಾಗುತ್ತಿದೆ ಎಂದರು.

ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸುವಂತೆ ಶಾಸಕ ಅರವಿಂದ್ ಬೆಲ್ಲದ್ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಸ್ಪೀಕರ್ ಕಾಗೇರಿಗೆ ಪತ್ರ ಬರೆದಿದ್ದರು.


Spread the love

About Laxminews 24x7

Check Also

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ,

Spread the love ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ, ಜನ ಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದ್ರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ