Breaking News

ಜೈಲಿನಿಂದ ಫೋನ್ ಕರೆ; ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ತನಿಖೆಗೆ ಸಿದ್ಧತೆ

Spread the love

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಶಾಸಕ ಬೆಲ್ಲದ್ ಅವರಿಗೆ ಜೈಲಿನಲ್ಲಿರುವ ಯುವರಾಜ ಸ್ವಾಮಿ ಎಂಬುವವರಿಂದ ಕರೆ ಬಂದಿದ್ದು, ಫೋನ್ ಕದ್ದಾಲಿಕೆ ಮಾಡುತ್ತಿರುವ ಬಗ್ಗೆ ಸ್ವತಃ ಶಾಸಕರು ಆರೋಪಿಸಿದ್ದರು. ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವಂತೆ ಡಿಜಿ, ಐಜಿಪಿ ಕಚೇರಿಯಿಂದ ಪತ್ರ ಬಂದಿದ್ದು, ಸೂಚನೆ ಮೇರೆಗೆ ತನಿಖೆ ನಡೆಸಲಾಗುತ್ತಿದೆ ಎಂದರು.

ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸುವಂತೆ ಶಾಸಕ ಅರವಿಂದ್ ಬೆಲ್ಲದ್ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಸ್ಪೀಕರ್ ಕಾಗೇರಿಗೆ ಪತ್ರ ಬರೆದಿದ್ದರು.


Spread the love

About Laxminews 24x7

Check Also

ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ 6 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕುಟುಂಬಸ್ಥರ ಒತ್ತಾಯ

Spread the love ರಾಯಚೂರು: ಕಳೆದ ವರ್ಷ ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ ಆರು ಮಂದಿಯನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕೆಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ