Breaking News

ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

Spread the love

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬಳಿಕವೂ ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್ ಬಿದ್ದಿಲ್ಲ. ಇದೀಗ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯಿತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಒತ್ತಾಯಿಸಿದ್ದಾರೆ.

ಅರುಣ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಸಿಎಂ ಬದಲಾವಣೆ ವಿಚಾರಕ್ಕೂ ನಮಗೂ ಸಂಬಂಧವಿಲ್ಲ. ನಾವು ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಲೂ ಇಲ್ಲ. ಆದರೆ ರಾಜ್ಯದಲ್ಲಿ ಕೆಲ ನಾಯಕರಿಂದಲೇ ಇಂತಹ ಹೇಳಿಕೆ ಬರುತ್ತಿರುವುದರಿಂದ ಸುಮ್ಮನೆ ಇರಲು ಸಾಧ್ಯವಿಲ್ಲ. ಒಂದುವೇಳೆ ವರಿಷ್ಠರು ಸಿಎಂ ಬದಲಾವಣೆಗೆ ಚಿಂತನೆ ನಡೆಸಿದರೆ ನಮ್ಮ ಲಿಂಗಾಯತ ಸಮುದಾಯಕ್ಕೆ ಸ್ಥಾನ ನೀಡಬೇಕು ಎಂದು ಹೇಳಿದ್ದೇನೆ ಎಂದರು.

ನಮ್ಮ ಸಮುದಾಯದಲ್ಲಿ ಪರ್ಯಾಯ ನಾಯಕರಿಲ್ಲ ಎಂಬು ಅಪಾರ್ಥ ಮಾಡಲು ಹೋಗಬೇಡಿ. ಸಮರ್ಥರಾದ ಪರ್ಯಾಯ ನಾಯಕರು ಉತ್ತರ ಕರ್ನಾಟಕದಲ್ಲಿದ್ದಾರೆ. ಒಂದು ವೇಳೆ ಸಿಎಂ ಬದಲಾವಣೆ ಪ್ರಯತ್ನ ಮಾಡಿದರೆ ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಬೇಕು ಎಂಬುದು ನಮ್ಮ ಆಶಯ. ನಾವು ಒತ್ತಡ ಹೇರುತ್ತಿಲ್ಲ. ಸಲಹೆ ಗಳನ್ನು ಮಾತ್ರ ನೀಡಬಹುದು ಎಂದು ಹೇಳಿದರು.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ