Breaking News

ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್

Spread the love

ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು.

ಡಾ.ಸೋನಾಲಿ ಸರ್ನೋಬತ್

 

 

 

 

ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು.

ಹೈಕೋರ್ಟ್ ಆದೇಶ ಮತ್ತು ಕಾನೂನು ಪ್ರಕಾರ ಈ ರೀತಿ ಪ್ರಾಣಿಗಳನ್ನು ಮನರಂಜನೆಗೆ ಬಳಸುವುದು ನಿಷಿದ್ಧ. ಬೆಳಗಾವಿಯ ಎನಿಮಲ್ ರೆಸ್ಕ್ಯೂ ಆ್ಯಂಡ್ ಕೆರ್ (BARC) ಎನ್ ಜಿಒ ಸದಸ್ಯರು ಈ ಒಂಟೆಗಳನ್ನು ಪುಣೆ ಎಪಿಎಂಸಿಗೆ ಸಾಗಿಸಲು ಮುಂದಾದರು. ಕ್ರೇನ್ ಮೂಲಕ ಅವುಗಳನ್ನು ಲಿಫ್ಟ್ ಮಾಡಿ ಲಾರಿಗಳಲ್ಲಿ ಸಾಗಿಸಲಾಯಿತು.

 

 

 

 

 

ಈ ವೇಳೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಪಸ್ಥಿತರಿದ್ದು ಉಸ್ತುವಾರಿ ನೋಡಿಕೊಂಡರು. ಸೋನಾಲಿ ಸರ್ನೋಬತ್ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಈ ವಿಷಯದಲ್ಲಿ ನೆರವು ಕೇಳಿದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ