Breaking News
Home / ಜಿಲ್ಲೆ / ಬೆಂಗಳೂರು / ನೀರಾವರಿ ಟೆಂಡರ್‌ ₹2000 ಕೋಟಿ ಕಿಕ್‌ ಬ್ಯಾಕ್‌ ಆರೋಪ ತನಿಖೆಯಾಗಲಿ: ಎಚ್‌ಡಿಕೆ

ನೀರಾವರಿ ಟೆಂಡರ್‌ ₹2000 ಕೋಟಿ ಕಿಕ್‌ ಬ್ಯಾಕ್‌ ಆರೋಪ ತನಿಖೆಯಾಗಲಿ: ಎಚ್‌ಡಿಕೆ

Spread the love

ಬೆಂಗಳೂರು: 2006ರಲ್ಲಿ ಸಿಎಂ ಆಗಿದ್ದಾಗ ನನ್ನ ಮೇಲೆ ಬಿಜೆಪಿ ನಾಯಕರು ಮಾಡಿರುವ ಗಣಿ ಲಂಚ ಆರೋಪ ತನಿಖೆಯನ್ನು ಸ್ವತಃ ನಾನೇ ಲೋಕಾಯುಕ್ತಕ್ಕೆ ನೀಡಿ ಪಾರದರ್ಶಕತೆ ಮೆರೆದಿದ್ದೆ. ಈಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಕಾರದ ವಿರುದ್ಧ ಸ್ವಪಕ್ಷೀಯರಿದಂಲೇ ₹2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಲಾಗಿದೆ. ಈ ಕುರಿತು ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ ₹150ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ₹2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಿದ್ದಾರೆ. ಈಗ ತನಿಖೆ ಯಾಕಿಲ್ಲ?’ ಎಂದು ಕೇಳಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ