Breaking News
Home / ರಾಜಕೀಯ / ಮಳೆ, ಪ್ರವಾಹದಿಂದ ಹಾನಿ: ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ

ಮಳೆ, ಪ್ರವಾಹದಿಂದ ಹಾನಿ: ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ

Spread the love

ಬೆಂಗಳೂರು: ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಮಳೆ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ., ಭಾಗಶಃ ಹಾನಿಯಾಗಿರುವ ಮನೆ 1 ಲಕ್ಷ ರೂ., ನೀರು ನುಗ್ಗಿ ಹಾನಿಯಾಗಿದ್ದರೆ 10 ಸಾವಿರ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಭಾಗಿಯಾಗಿದ್ದ ಅಶೋಕ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರವಾಹ ಪೀಡಿತರಿಗೆ ಸೂಕ್ತ ಪರಿಹಾರ ನೀಡಲಾಗುವುದು. ಇತ್ತೀಚೆಗೆ ಚಂಡಮಾರುತದ ಸಂದರ್ಭದಲ್ಲಿ 300 ಮನೆಗಳು ಸಂಪೂರ್ಣ ಹಾನಿಯಾಗಿದ್ದು, ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸಿಎಂ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ