Breaking News

ರಾಜ್ಯದಲ್ಲಿ ತಗ್ಗಿದ ಎರಡನೆ ಅಲೆ, ಶಾಲೆ ಪುನಾರಂಭಕ್ಕೆ ಸಲಹೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಪುನರಾರಂಭ ಸೂಕ್ತವೆಂಬ ಸಲಹೆ ಕೇಳಿ ಬಂದಿದೆ.

ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸುವುದು ಸೂಕ್ತವೆಂದು ಕಾರ್ಯಪಡೆ ಸಲಹೆ ನೀಡಿದೆ. ಸುರಕ್ಷತೆ ಕ್ರಮಗಳೊಂದಿಗೆ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು 17 ಅಂಶಗಳನ್ನೊಳಗೊಂಡ ಮಧ್ಯಂತರ ವರದಿಯನ್ನು ತಜ್ಞರ ಕಾರ್ಯಪಡೆ ಸರ್ಕಾರಕ್ಕೆ ಸಲ್ಲಿಸಿದೆ.

ದೀರ್ಘಾವಧಿ ಶಾಲೆಗೆ ಮಕ್ಕಳು ಹೋಗಲು ಸಾಧ್ಯವಾಗದಿದ್ದರೆ ಶೈಕ್ಷಣಿಕವಾಗಿ ಸಮಸ್ಯೆ ಎದುರಿಸಬೇಕಾಗುತ್ತದೆ ಅವರ ಭವಿಷ್ಯದ ಹಿತದೃಷ್ಟಿಯಿಂದ ಸುರಕ್ಷತೆ ಕ್ರಮಗಳೊಂದಿಗೆ ಶಾಲೆ ಆರಂಭಿಸಬಹುದು. ಸೋಂಕಿನ ಪ್ರಮಾಣ ಹೆಚ್ಚಿರುವ ಲಕ್ಷಣ ಕಂಡಲ್ಲಿ ತಾತ್ಕಾಲಿಕವಾಗಿ ಶಾಲೆ ಮುಚ್ಚಬಹುದು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ