Breaking News

3 ವರ್ಷಗಳ ಹಿಂದಿನ ಖೋಟಾನೋಟು ಪ್ರಕರಣಕ್ಕೆ ಟ್ವಿಸ್ಟ್: ಪ್ರಮುಖ ಬಾಂಗ್ಲಾದ ಆರೋಪಿ ಅರೆಸ್ಟ್

Spread the love

ಬೆಂಗಳೂರು: ಕರ್ನಾಟಕದಲ್ಲಿ‌ ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಶರೀಫುಲ್ಲಾ ಇಸ್ಲಾಂ ಎಂಬಾತನನ್ನ ಎನ್​ಐಎ ಬಂಧಿಸಿದೆ. ಈತನನ್ನ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಾಬಾಪುರದಲ್ಲಿ ಬಂಧಿಸಲಾಗಿದೆ..

ಬಾಂಗ್ಲಾ ಮೂಲದ ವ್ಯಕ್ತಿಗಳಿಂದ ಈತ ನಕಲಿ ಭಾರತೀಯ ನೋಟು ಪಡೆಯುತ್ತಿದ್ದ ಹಾಗೂ ಕರ್ನಾಟಕದಲ್ಲಿ ಆ ಖೋಟಾನೋಟುಗಳನ್ನ ಚಲಾವಣೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದ ಎನ್ನಲಾಗಿದೆ.

ಏನಿದು ಪ್ರಕರಣ..?

2018 ರ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಖೋಟಾನೋಟು ಚಲಾವಣೆ ಪ್ರಕರಣ ದಾಖಲಾಗಿತ್ತು. ಆಗ ಇಬ್ಬರು ಆರೋಪಿಗಳನ್ನ ಚಿಕ್ಕೋಡಿ ಪೊಲೀಸರು ಬಂಧಿಸಿದ್ದರು. ಈ ವೇಳೆ 82 ಸಾವಿರ ಖೋಟಾ ನೋಟುಗಳನ್ನ ಜಪ್ತಿ ಮಾಡಲಾಗಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡು ಎನ್‌ಐಎ ತನಿಖೆ ಆರಂಭಿಸಿತ್ತು. ಪ್ರಕರಣದ ಐವರು ಆರೋಪಿಗಳಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ 6 ವರ್ಷ ಸಜೆ ವಿಧಿಸಿತ್ತು. ಸದ್ಯ ಪ್ರಮುಖ ಆರೋಪಿ ಶರೀಫುಲ್ಲಾ ಇಸ್ಲಾಂ ಬಂಧನವಾಗಿದ್ದು.. ಬಾಂಗ್ಲಾ ಮೂಲದ ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ