Breaking News

3 ವರ್ಷಗಳ ಹಿಂದಿನ ಖೋಟಾನೋಟು ಪ್ರಕರಣಕ್ಕೆ ಟ್ವಿಸ್ಟ್: ಪ್ರಮುಖ ಬಾಂಗ್ಲಾದ ಆರೋಪಿ ಅರೆಸ್ಟ್

Spread the love

ಬೆಂಗಳೂರು: ಕರ್ನಾಟಕದಲ್ಲಿ‌ ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಶರೀಫುಲ್ಲಾ ಇಸ್ಲಾಂ ಎಂಬಾತನನ್ನ ಎನ್​ಐಎ ಬಂಧಿಸಿದೆ. ಈತನನ್ನ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಾಬಾಪುರದಲ್ಲಿ ಬಂಧಿಸಲಾಗಿದೆ..

ಬಾಂಗ್ಲಾ ಮೂಲದ ವ್ಯಕ್ತಿಗಳಿಂದ ಈತ ನಕಲಿ ಭಾರತೀಯ ನೋಟು ಪಡೆಯುತ್ತಿದ್ದ ಹಾಗೂ ಕರ್ನಾಟಕದಲ್ಲಿ ಆ ಖೋಟಾನೋಟುಗಳನ್ನ ಚಲಾವಣೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದ ಎನ್ನಲಾಗಿದೆ.

ಏನಿದು ಪ್ರಕರಣ..?

2018 ರ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಖೋಟಾನೋಟು ಚಲಾವಣೆ ಪ್ರಕರಣ ದಾಖಲಾಗಿತ್ತು. ಆಗ ಇಬ್ಬರು ಆರೋಪಿಗಳನ್ನ ಚಿಕ್ಕೋಡಿ ಪೊಲೀಸರು ಬಂಧಿಸಿದ್ದರು. ಈ ವೇಳೆ 82 ಸಾವಿರ ಖೋಟಾ ನೋಟುಗಳನ್ನ ಜಪ್ತಿ ಮಾಡಲಾಗಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡು ಎನ್‌ಐಎ ತನಿಖೆ ಆರಂಭಿಸಿತ್ತು. ಪ್ರಕರಣದ ಐವರು ಆರೋಪಿಗಳಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ 6 ವರ್ಷ ಸಜೆ ವಿಧಿಸಿತ್ತು. ಸದ್ಯ ಪ್ರಮುಖ ಆರೋಪಿ ಶರೀಫುಲ್ಲಾ ಇಸ್ಲಾಂ ಬಂಧನವಾಗಿದ್ದು.. ಬಾಂಗ್ಲಾ ಮೂಲದ ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ