Breaking News
Home / ಜಿಲ್ಲೆ / ಬೆಳಗಾವಿ / ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರ..?

ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರ..?

Spread the love

ಬೆಳಗಾವಿ :  ಸಿಡಿ ಪ್ರಕರಣದ ನಂತ್ರ, ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಶತಾಯಗತಾಯ ಮತ್ತೆ ಸಚಿವರಾಗಬೇಕು ಎನ್ನುವಂತ ಕಸರತ್ತಿನಲ್ಲಿಯೂ ತೊಡಗಿರುವಂತ ಅವರು, ಮಂತ್ರಿ ಸ್ಥಾನ ಸಿಗದೇ ಇದ್ದರೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆಯಲಿದ್ದಾರೆ ಎನ್ನಲಾಗುತ್ತಿದೆ.

 

ಸಿಡಿ ಪ್ರಕರಣದ ನಂತ್ರ, ಬೆಂಗಳೂರಿನಿಂದಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರ ಉಳಿದು, ಗೋಕಾಕ್ ತಮ್ಮ ಕ್ಷೇತ್ರದಲ್ಲಿ ಬೀಡು ಬಿಡ್ಡು, ಕೊರೋನಾ ನಿಯಂತ್ರಣ, ಜನರಿಗೆ ನೆರವಾಗುವಂತ ಕೆಲಸದಲ್ಲಿ ತೊಡಗಿದ್ದಾರೆ. ಇದಲ್ಲದೇ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡದೇ ದೂರವೇ ಉಳಿದಿರುವಂತ ಅವರ ಬಗ್ಗೆ, ಈಗ ಸ್ಪೋಟಕ ಸುದ್ದಿಯೊಂದು ಹೊರ ಬಿದ್ದಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನೇ ನೀಡಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೂ ಮೊದಲು ಮಹಾರಾಷ್ಟ್ರಕ್ಕೆ ತೆರಳಿರುವಂತ ಅವರು, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಈ ಬಳಿಕ ಜೂನ್.23ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ